
ದೇಶದೆಲ್ಲೆಡೆ ಹೊಸ ಟ್ರಾಫಿಕ್ ನಿಯಮ ಹಾಗೂ ದಂಡ ಜಾರಿಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಕಟ್ಟು ನಿಟ್ಟಾಗಿ ಹೊಸ ನಿಯಮದನ್ವಯ ದಂಡ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ನೂತನ ನಿಯಮ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇಷ್ಟಾದರೂ ನಿಯಮ ಉಲ್ಲಂಘಿಸಿ ಹಲವು ಕಡೆ ಭಾರಿ ಮೊತ್ತದ ದಂಡ ಕಟ್ಟಿದ ಘಟನೆ ವರದಿಯಾಗುತ್ತಿದೆ.
ಹೊಸ ಟ್ರಾಫಿಕ್ ನಿಯಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ- ವಿರೋಧ ಚರ್ಚೆ ಕೂಡಾ ನಡೆಯುತ್ತಿದೆ. ನಟಿ ಸೋನು ಗೌಡ ಮುಖ್ಯಮಂತ್ರಿಯವರನ್ನು ಉದ್ದೇಶಿಸಿ ಟ್ವೀಟ್ ವೊಂದನ್ನು ಮಾಡಿದ್ದಾರೆ.
ದಂಡ ವಿಧಿಸುವ ಮುನ್ನ ನೀವು ಒಳ್ಳೆಯ ರಸ್ತೆಗಳನ್ನು ಕೊಟ್ಟಿದ್ದೀರಾ ಎಂದು ನೋಡಿಕೊಳ್ಳಿ. ಜನಸಾಮಾನ್ಯರು ಕಷ್ಟಪಟ್ಟು ದುಡಿದ ಹಣವನ್ನು ತೆಗೆದುಕೊಂಡು ಅವರನ್ನು ಕಷ್ಟಕ್ಕೆ ತಳ್ಳಬೇಡಿ. ರಸ್ತೆಗಳಲ್ಲಿ ಕಾಣಸಿಗುವ ಪ್ರತಿಯೊಂದು ಗುಂಡಿಗಳಿಗೆ ಸರ್ಕಾರಕ್ಕೆ ನಾವೆಷ್ಟು ಫೈನ್ ಹಾಕಬೇಕು? ಟ್ರಾಫಿಕ್ ರೂಲ್ಸ್ ಮಾಡುವ ಮುನ್ನ ಒಳ್ಳೆಯ ರಸ್ತೆಗಳನ್ನು ನೀಡಿ’ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.