ಐಂದ್ರಿತಾ-ದಿಗಂತ್ ಪ್ರಾಣಿ ಪಕ್ಷಿ ಸೇವೆ ಮಾಡುತ್ತಿದ್ದಾರೆ

Published : Mar 29, 2018, 09:07 AM ISTUpdated : Apr 11, 2018, 12:37 PM IST
ಐಂದ್ರಿತಾ-ದಿಗಂತ್ ಪ್ರಾಣಿ ಪಕ್ಷಿ ಸೇವೆ ಮಾಡುತ್ತಿದ್ದಾರೆ

ಸಾರಾಂಶ

ಐಂದ್ರಿತಾ ರೇ ಎಲ್ಲರಂತೆ ಅಲ್ಲ. ಐಂದ್ರಿತಾ ರೇ ಇತ್ತೀಚೆಗೆ ಗಾಯಗೊಂಡ ಬೀದಿ  ನಾಯಿಯೊಂದನ್ನು ರಕ್ಷಿಸಿ ಪೋಷಿಸಿದ್ದರು. ಅನಂತರ ಎಲ್ಲರಲ್ಲೂ ಪ್ರಾಣಿಗಳನ್ನು ಚೆನ್ನಾಗಿ ನೋಡಿಕೊಳ್ಳು ಎಂದು ವಿನಂತಿಸಿದ್ದರು ಕೂಡ. ಇಂಥಾ ಐಂದ್ರಿತಾ ಈಗ ಮತ್ತೆ ಒಂದು  ಹೆಜ್ಜೆ ಮುಂದಿಟ್ಟಿದ್ದಾರೆ.

ಬೆಂಗಳೂರು (ಮಾ. 29): ಐಂದ್ರಿತಾ ರೇ ಎಲ್ಲರಂತೆ ಅಲ್ಲ. ಐಂದ್ರಿತಾ ರೇ ಇತ್ತೀಚೆಗೆ ಗಾಯಗೊಂಡ ಬೀದಿ  ನಾಯಿಯೊಂದನ್ನು ರಕ್ಷಿಸಿ ಪೋಷಿಸಿದ್ದರು. ಅನಂತರ ಎಲ್ಲರಲ್ಲೂ ಪ್ರಾಣಿಗಳನ್ನು ಚೆನ್ನಾಗಿ ನೋಡಿಕೊಳ್ಳು ಎಂದು ವಿನಂತಿಸಿದ್ದರು ಕೂಡ. ಇಂಥಾ ಐಂದ್ರಿತಾ ಈಗ ಮತ್ತೆ ಒಂದು  ಹೆಜ್ಜೆ ಮುಂದಿಟ್ಟಿದ್ದಾರೆ.
ಬೇಸಿಗೆಯಲ್ಲಿ ಮನುಷ್ಯರೇ ನೀರು ಸಿಗದಿದ್ದರೆ ತತ್ತರಿಸಿ ಹೋಗುತ್ತಾರೆ. ಅಂಥದ್ದರಲ್ಲಿ  ಬೆಂಗಳೂರಿನಂತಹ ಮಹಾನಗರದಲ್ಲಿ ಪ್ರಾಣಿ, ಪಕ್ಷಿಗಳು ನೀರಿಗಾಗಿ ಎಲ್ಲಿಗೆ ಹೋಗಬೇಕು? ಅದಕ್ಕಾಗಿ ಐಂದ್ರಿತಾ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಪ್ರಾಣಿ, ಪಕ್ಷಿಗಳಿಗಾಗಿ ನೀರಿನ ತೊಟ್ಟಿ ಇಡಲು  ಆಲೋಚಿಸಿದ್ದಾರೆ. ಅದಕ್ಕಾಗಿ ತೊಟ್ಟಿಗಳನ್ನು ರೆಡಿ ಮಾಡಿದ್ದಾರೆ.
ಐಂದ್ರಿತಾರ ಈ ಒಳ್ಳೆಯ ಕೆಲಸಕ್ಕೆ ದಿಗಂತ್ ಸೇರಿದಂತೆ  ಸುಮಾರು ಮಂದಿ ಸಮಾನ ಮನಸ್ಕರು ಕೈ  ಜೋಡಿಸಿದ್ದಾರೆ. ರಣ ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳು ನೋಯದಿರಲು ಈ ಮೂಲಕ ಒಳ್ಳೆಯ ಸಂದೇಶವನ್ನು ರವಾನಿಸಿದ್ದಾರೆ. ಯಾವುದಾದರೂ ಬೀದಿಯಲ್ಲಿ ಪ್ರಾಣಿ, ಪಕ್ಷಿಗಳು ನೀರಿಗಾಗಿ ಒದ್ದಾಡುವುದು ಕಂಡರೆ ಸಾಕು ವಾಲಂಟಿಯರ್‌ಗಳಿಗೆ  ದೂರವಾಣಿ ಕರೆ ಮಾಡಬಹುದು. ಅವರು ನೀರಿನ ತೊಟ್ಟಿಯನ್ನು ಉಚಿತವಾಗಿ ನೀಡುತ್ತಾರೆ. ಅದನ್ನು ತಂದು ಬೀದಿಯಲ್ಲಿ  ನೀರು ತುಂಬಿಸಿಟ್ಟರೆ ಸಾಕು.
ಈ ಒಳ್ಳೆಯ ಕೆಲಸಕ್ಕೆ  ಐಂದ್ರಿತಾರಿಗೆ ನಮ್ಮ ಕಡೆಯಿಂದ ಒಂದು ಥ್ಯಾಂಕ್ಸ್ ಹೇಳೋಣ ಅಲ್ಲವೇ? 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹಿಂದೂ ಹೆಸರಿನ ಮೂಲಕವೇ ಚಿತ್ರರಂಗದಲ್ಲಿ ಧೂಳೆಬ್ಬಿಸಿದ ಮುಸ್ಲಿಂ ನಟರು
ಚೈತ್ರಾ ಕುಂದಾಪುರ 2ನೇ ಬಾರಿ ಬಿಗ್ ಬಾಸ್ ಮನೆಗೆ ಬಂದ್ರೂ ಚೀಪ್ ಮೆಂಟಾಲಿಟಿ ಆಟ ಬಿಡ್ಲಿಲ್ಲ!