
ಬೆಂಗಳೂರು : ಶ್ರುತಿ ಹರಿಹರನ್ ಹಿರಿಯ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಕ್ಕೆ ಇದೀಗ ಸ್ವತಃ ಅರ್ಜುನ್ ಸರ್ಜಾ ಅವರೇ ಪ್ರತಿಕ್ರಿಯಿಸಿದ್ದಾರೆ.
ನಟಿ ಶ್ರುತಿ ಹರಿಹರನ್ ಬಗ್ಗೆ ತಾವು ತುಂಬಾ ಗೌರವವನ್ನು ಇರಿಸಿಕೊಂಡಿದ್ದೆ. ಆಕೆ ಮಾಡಿರುವ ಆರೋಪದಿಂದ ಮನಸ್ಸಿಗೆ ತುಂಬಾ ನೋವುಂಟಾಗಿದೆ. ಶ್ರುತಿ ಹರಿಹರನ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸರ್ಜಾ ಹೇಳಿದ್ದಾರೆ.
"
ನನ್ನ ವಿರುದ್ಧ ಮಾಡಿರುವ ಆರೋಪ ನನಗೆ ನಂಬಲಾಗುತ್ತಿಲ್ಲ. ನಾನು ಶ್ರುತಿ ಚನ್ನಾಗಿ ನಟಿಸುತ್ತಾಳೆ ಎಂದಷ್ಟೇ ಹೇಳಿದ್ದೆ. ಅದನ್ನು ಬಿಟ್ಟು ಅವಳ ಬಗ್ಗೆ ಯಾವತ್ತೂ ಏನೂ ಮಾತನಾಡಲು ಹೋಗಿಲ್ಲ. ಇಂತಹ ಆರೋಪದಿಂದ ಅವರ ಬಗ್ಗೆ ಇದ್ದ ಗೌರವ ಹೋಗಿದೆ. ಪ್ರಚಾರಕ್ಕಾಗಿ ಈರೀತಿ ಮಾಡಿರುವು ನಾಚಿಕೆ ಸಂಗತಿ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡಿದ್ದರೆ ನಾಚಿಕೆ ಆಗಲ್ವಾ ಎಂದು ತಿರುಗೇಟು ನೀಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.