ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಿಗ್'ಬಾಸ್ ಪ್ರಥಮ್

Published : Apr 05, 2018, 06:20 PM ISTUpdated : Apr 14, 2018, 01:12 PM IST
ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಬಿಗ್'ಬಾಸ್ ಪ್ರಥಮ್

ಸಾರಾಂಶ

 ಪಕ್ಷದ‌ ಪರವಾಗಿ ಚುನಾವಣಾ ಪ್ರಚಾರ ಮಾಡುವ ಬಗ್ಗೆ ಸಿಎಂ ಏನು ಹೇಳಿಲ್ಲ. ಅವರು ಒಬ್ಬರು ಅದ್ಭುತ ವ್ಯಕ್ತಿ. ಅವರು ಏನೇ ಹೇಳಿದರೂ ಕೇಳುತ್ತೇನೆ 'ಎಂದು ಪರೋಕ್ಷವಾಗಿ ಪ್ರಚಾರಕ್ಕೆ ಬೆಂಬಲ ಕೊಡುವುದಾಗಿ ಹೇಳಿದರು.

ಬೆಂಗಳೂರು(ಏ.05): ಕಳೆದ ಬಾರಿಯ ರಿಯಾಲಿಟಿ ಶೋ ಬಿಗ್ ಬಾಸ್ ವಿಜೇತ ಪ್ರಥಮ್ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ತಮ್ಮ ನಟನೆಯ ಎಂಎಲ್ಎ ಸಿನಿಮಾದ ಧ್ವನಿಸುರುಳಿ ಸಮಾರಂಭಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿನಿಮಾ ಆಡಿಯೋ ಬಿಡುಗಡೆಗೆ ಬರುವಂತೆ ಸಿಎಂ ಅವರಿಗೆ ಆಹ್ವಾನಿಸಿದ್ದೇನೆ.ಬಿಡುವಾದರೆ ಸಮಾರಂಭಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ. ಪಕ್ಷದ‌ ಪರವಾಗಿ ಚುನಾವಣಾ ಪ್ರಚಾರ ಮಾಡುವ ಬಗ್ಗೆ ಸಿಎಂ ಏನು ಹೇಳಿಲ್ಲ. ಅವರು ಒಬ್ಬರು ಅದ್ಭುತ ವ್ಯಕ್ತಿ. ಅವರು ಏನೇ ಹೇಳಿದರೂ ಕೇಳುತ್ತೇನೆ 'ಎಂದು ಪರೋಕ್ಷವಾಗಿ ಪ್ರಚಾರಕ್ಕೆ ಬೆಂಬಲ ಕೊಡುವುದಾಗಿ ಹೇಳಿದರು.

ಕುಮಾರಸ್ವಾಮಿ, ದೇವೇಗೌಡ, ಯಡಿಯೂರಪ್ಪ ಕೂಡ ಒಳ್ಳೆಯವರು. ಆಗಂತ ಅವರ ಜೊತೆಗಿರುವ ಕೆಟ್ಟ ವ್ಯಕ್ತಿಗಳಿಗೆ ನಾನು ಬೆಂಬಲ ನೀಡುವುದಿಲ್ಲ. ಪಕ್ಷ ನೋಡಿ ಕೆಲಸ ಮಾಡಲ್ಲ. ಒಳ್ಳೆಯ ವ್ಯಕ್ತಿಗಳನ್ನು ನೋಡಿ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Amruthadhaare Serial: ಬಲು ಕಿಲಾಡಿ ಈ ಅಜ್ಜಿ! ಕೊನೆ ಆಸೆ ಈಡೇರಿಸಿಕೊಳ್ತೇನಂತ ಸತ್ತೇ ಹೋಗೋದಾ? ಮಾಡಿದ್ದೇನು ನೋಡಿ!
2025ರಲ್ಲಿ ಸಿನಿಮಾ ಇಲ್ಲದಿದ್ದರೂ ಪ್ರಭಾಸ್ ಕ್ರೇಜ್ ಟಾಪ್: 4000 ಕೋಟಿ ಬ್ಯುಸಿನೆಸ್ ಮಾಡುತ್ತಿರುವ ರೆಬೆಲ್ ಸ್ಟಾರ್!