
ಮುಂಬೈ(ಆ.24): ಬಾಲಿವುಡ್ ನ ಜನಪ್ರಿಯ ನೃತ್ಯಗಾರ ಅಭಿಜಿತ್ ಶಿಂಧೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಿಂಧೆ ಮುಂಬೈನ ಬಂಧೂಪ್ ಬಳಿ ಇರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ರಣಬೀರ್ ಕಪೂರ್ ಮತ್ತು ಅಜಯ್ ದೇವಗನ್ ಅವರಂತ ಮೇರು ನಟರೊಡನೆ ಕೆಲಸ ಮಾಡಿದ್ದ ಶಿಂಧೆ, ದೀರ್ಘ ಕಾಲದಿಂಡ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮೂರು ತಿಂಗಳ ಹಿಂದೆ ಅಭಿಜಿತ್ ಪತ್ನಿ ಅವರನ್ನು ತ್ಯಜಿಸಿದ್ದರು. ಪತಿ-ಪತ್ನಿಯರಲ್ಲಿ ಮನಸ್ತಾಪವಿತ್ತು.ಅಭಿಜೀತ್ ಪತ್ನಿ ಅವರಿಗೆ ಮಗಳನ್ನು ಭೇಟಿಯಾಗುವುದಕ್ಕೆ ಸಹ ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ.
ಈ ಎಲ್ಲಾ ಕಾರಣದಿಂದ ಬೇಸತ್ತಿದ್ದ ಅಭಿಜಿತ್ ನಿನ್ನೆ ಬೆಳಗ್ಗೆ ತಮ್ಮ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಲೀಸರು ಆತ್ಮಹತ್ಯೆ ಪ್ರಕರಣ ದಾಕಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.