'ಪದ್ಮಾವತಿ' ಆಗ್ತಾಳೆ 'ಪದ್ಮಾವತ್', ಚಿತ್ರ ಬಿಡುಗಡೆಗೆ ಸೆನ್ಸಾರ್ ಬೋರ್ಡ್ ಒಪ್ಪಿಗೆ

Published : Dec 30, 2017, 04:21 PM ISTUpdated : Apr 11, 2018, 12:54 PM IST
'ಪದ್ಮಾವತಿ' ಆಗ್ತಾಳೆ 'ಪದ್ಮಾವತ್', ಚಿತ್ರ ಬಿಡುಗಡೆಗೆ ಸೆನ್ಸಾರ್ ಬೋರ್ಡ್ ಒಪ್ಪಿಗೆ

ಸಾರಾಂಶ

- ರಾಣಿ ಪದ್ಮಾವತಿಯನ್ನು ಅವಮಾನಿಸಲಾಗಿದೆ ಚಿತ್ರ ಬಿಡುಗಡೆಗೆ ವ್ಯಕ್ತವಾಗಿತ್ತು ವಿರೋಧ - ತಜ್ಞರ ಅಭಿಮತದಿಂದ ಚಿತ್ರ ಬಿಡುಗಡೆಗೆ ಒಪ್ಪಿಗೆ - ಶಿರ್ಷಿಕೆ ಸೇರಿ ಸಣ್ಣ ಪುಟ್ಟ ಬದಲಾವಣೆಗಳೊಂದಿಗೆ ಚಿತ್ರ ಬಿಡುಗಡೆಗೆ ಓಕೆ ಎಂದ ಸೆನ್ಸಾರ್ ಮಂಡಳಿ.

ಹೊಸದಿಲ್ಲಿ: ಬಹು ವಿವಾದಿತ  'ಪದ್ಮಾವತಿ' ಚಿತ್ರ ಬಿಡುಗಡೆಗೆ ಕೇಂದ್ರ ಸೆನ್ಸಾರ್ ಮಂಡಳಿ ಕಡೆಗೂ ಒಪ್ಪಿಗೆ ಸೂಚಿಸಿದ್ದು, ಚಿತ್ರದ ಹೆಸರನ್ನು 'ಪದ್ಮಾವತ್' ಎಂದು ಬದಲಾಯಿಸಲು ಸೂಚಿಸಿದೆ.

ಡಿಸೆಂಬರ್ 28ರಂದು ಮಂಡಳಿಯ ಪರೀಕ್ಷಾ ಸಮಿತಿಯು ಸಭೆ ನಡೆಸಿದ್ದು, ಚಿತ್ರಕ್ಕೆ 'ಯುಎ' ಪ್ರಮಾಣ ಪತ್ರ ನೀಡಲಿದ್ದು, ಚಿತ್ರದ ಹೆಸರಿನೊಂದಿಗೆ ಸಣ್ಣ ಪುಟ್ಟ ಬದಲಾವೆಗಳನ್ನು ಮಾಡಲು ಸೂಚಿಸಿದೆ.

16ನೇ ಶತಮಾನದ ಮಲಿಕ್ ಮುಹ್ಮದ್ ಜಯಸಿ ಅವರ 'ಪದ್ಮಾವತ್' ಎಂಬ ಮಹಾ ಕಾವ್ಯವನ್ನು ಆಧಾರವನ್ನಾಗಿಟ್ಟುಕೊಂಡು, 150 ಕೋಟಿ ರೂ. ವೆಚ್ಚದಲ್ಲಿ ಚಿತ್ರವನ್ನು ಮಾಡಲಾಗಿದೆ, ಎಂದು ಸಂಸದೀಯ ಸಮಿತಿ ಮುಂದೆ ಹಾಜರಾಗಿದ್ದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಹೇಳಿದ್ದರು.

'ಸತಿ' ಪದ್ಧತಿಯನ್ನು ವೈಭವೀಕರಣಗೊಳಿಸದಂತೆ ಹಾಗೂ 'ಘೂಮರ್' ಗೀತೆಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಲು ಮಂಡಳಿ ಸಲಹೆ ನೀಡಿದೆ. 

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅಭಿನಯದ ಈ ಚಿತ್ರದಲ್ಲಿ ರಾಣಿ ಪದ್ಮಾವತಿಯನ್ನು ಅವಮಾನಿಸಲಾಗಿದೆ, ಎಂದು ಆರೋಪಿಸಿ ದೇಶದ ಎಲ್ಲೆಡೆ ಪ್ರತಿಭಟನೆಗಳು ನಡೆದಿದ್ದು, ಚಿತ್ರ ಬಿಡುಗಡೆಗೆ ತಡೆಯಾಜ್ಞೆ ತರಲಾಗಿತ್ತು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದಳಪತಿ ವಿಜಯ್ 'ಜನ ನಾಯಗನ್' ಚಿತ್ರದ ಕಥೆ ಇದೇನಾ? ಲೀಕ್ ಆದ ಸ್ಟೋರಿ.. ಶಾಕ್ ಆಯ್ತು ಚಿತ್ರತಂಡ!
ನಾನು ಅವಳಲ್ಲ.. ಕಾಳ್ಗಿಚ್ಚಿನಂತೆ ಹರಡಿದ ಎಐ ಫೋಟೋ: ರಶ್ಮಿಕಾ, ಶ್ರೀಲೀಲಾ ಬಳಿಕ ಸಿಟ್ಟಾದ ನಿವೇತಾ ಥಾಮಸ್