
ಬೆಂಗಳೂರು (ಜು. 25): ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಪೈಲ್ವಾನ್ ಆಗಲು ಹೊರಟಿದ್ದಾರೆ. ಅಖಾಡಕ್ಕಿಳಿದು ಕುಸ್ತಿ ಮಾಡಲಿದ್ದಾರೆ. ಹೌದಾ? ಏನಿದು ಹೊಸ ಸುದ್ದಿ ಅಂತಿರಾ? ಹೌದು. ದಾವಣಗೆರೆಯ ಪೈಲ್ವಾನ್ ಕಾಟೇರಾ ಜೀವನಾಧಾರಿತ ಸಿನಿಮಾದಲ್ಲಿ ದರ್ಶನ್ ಅಭಿನಯಿಸಲಿದ್ದಾರೆ.
ಈಗಾಗಲೇ ಕಾಟೇರಾ ಬಗ್ಗೆ ಅಧ್ಯಯನ ನಡೆಸಿರುವ ದರ್ಶನ್ ಸಖತ್ ತಯಾರಿ ನಡೆಸುತ್ತಿದ್ದಾರೆ. ದಿನಕ್ಕೆ 25 ಚಪಾತಿ, 3 ಕೋಳಿ, 15 ಗ್ಲಾಸ್ ಕಲ್ಲಂಗಡಿ ಜ್ಯೂಸ್ ಸೇವಿಸಲಿದ್ದಾರೆ.
ದರ್ಶನ್’ಗೆ ಕಾಟೇರಾ ಪಾತ್ರ ಸಿಕ್ಕಾಪಟ್ಟೆ ಇಷ್ಟವಾಗಿದ್ದು ಒಂದು ಕಂಡೀಶನ್ ಹಾಕಿದ್ದಾರೆ. ಚಿತ್ರದಲ್ಲಿ ಶೇ. 96 ರಷ್ಟು ಕನ್ನಡಿಗರೇ ಇರಬೇಕು ಎಂದಿದ್ದಾರಂತೆ. ನವೆಂಬರ್’ನಲ್ಲಿ ಚಿತ್ರೀಕರಣ ಶುರುವಾಗಲಿದೆ. ನಿರ್ಮಾಪಕ ಉಮಾಪತಿ ಈ ಚಿತ್ರವನ್ನು ನಿರ್ಮಿಸಲಿದ್ದು ಸ್ವತಃ ಅವರೇ ಈ ಸುದ್ದಿಯನ್ನು ಹೊರಹಾಕಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.