ಪ್ರಾಣಿಯಾಯ್ತು , ಈಗ ಇಡೀ ಬೆಟ್ಟವನ್ನೇ ದತ್ತು ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

Published : Dec 18, 2018, 01:34 PM ISTUpdated : Dec 18, 2018, 01:38 PM IST
ಪ್ರಾಣಿಯಾಯ್ತು , ಈಗ ಇಡೀ ಬೆಟ್ಟವನ್ನೇ ದತ್ತು ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಸಾರಾಂಶ

ಮುಂದುವರೆದ ದರ್ಶನ್ ಸಾಮಾಜಿಕ ಕಾರ್ಯ | ಪ್ರಾಣಿಗಳಾಯ್ತು, ಈಗ ಇಡೀ ಬೆಟ್ಟವನ್ನೇ ದತ್ತು ಪಡೆದ ಚಾಲೆಂಜಿಂಗ್ ಸ್ಟಾರ್ | ಈ ಬೆಟ್ಟದ ಸಂಪೂರ್ಣ ಅಭಿವೃದ್ಧಿ ಕಾರ್ಯ ದರ್ಶನ್ ಹೆಗಲಿಗೆ 

ಬೆಂಗಳೂರು (ಡಿ. 18): ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ಸಿನಿಮಾಕ್ಕಿಂತ ಹೆಚ್ಚಾಗಿ ಸಾಮಾಜಿಕ ಕಾರ್ಯಗಳಿಂದಲೇ ಹೆಚ್ಚು ಹೆಸರು ಮಾಡುತ್ತಿದ್ದಾರೆ. ಬೆಟ್ಟ, ಗುಡ್ಡ, ಪ್ರಾಣಿಗಳೆಂದು ಕ್ಯಾಮೆರಾ ಹಿಡಿದು ಕಾಡುಮೇಡು ಸುತ್ತುತ್ತಿರುತ್ತಾರೆ.  ರಾಜ್ಯ ಅರಣ್ಯ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದ ದರ್ಶನ್ 

ಪ್ರಾಣಿಗಳೆಂದರೆ ಇವರಿಗೆ ಅಪಾರ ಪ್ರೀತಿ. ಇತ್ತೀಚಿಗೆ ಮೈಸೂರು ಮೃಗಾಲಯದಿಂದ ಹುಲಿ, ಆನೆಯನ್ನು ದತ್ತು ಪಡೆದಿದ್ದಾರೆ. ಜೊತೆಗೆ ಸ್ನೇಹಿತರಿಗೂ ತೆಗೆದುಕೊಳ್ಳುವಂತೆ ಪ್ರೇರೇಪಿಸಿದ್ದಾರೆ. ಇವರ ಪರಿಸರ ಪ್ರೀತಿ ಇಷ್ಟಕ್ಕೇ ಸೀಮಿತಾಗಿಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕಾಡನ್ನೇ ದತ್ತು ಪಡೆದಿದ್ದಾರೆ. ಮಲೆ ಮಹದೇಶ್ವರ ಬೆಟ್ಟವನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಮನಸ್ಸು ಮಾಡಿದ್ದಾರೆ. 

ದರ್ಶನ್ ಅಸಲಿ ಮುಖ ತಿಳಿಯಬೇಕಾದರೆ ಈ ವಿಡಿಯೋ ನೋಡಲೇಬೇಕು!

ಚಾಲೆಂಜಿಂಗ್ ಸ್ಟಾರ್ ಈಗೀಗ ಹೆಚ್ಚಿನ ಸಮಯವನ್ನು ಕಾಡು, ಬೆಟ್ಟಗಳಲ್ಲೇ ಕಳೆಯುತ್ತಿದ್ದಾರೆ. ಅರಣ್ಯ ಇಲಾಖೆಯ ರಾಯಭಾರಿಯಾಗಿ ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಿದ್ದಾರೆ. ಹಾಗಂತ ಶೂಟಿಂಗ್ ಗೂ ತಪ್ಪಿಸಿಕೊಳ್ಳುತ್ತಿಲ್ಲ. ದರ್ಶನ್ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

The Devil Movie Review: ದರ್ಶನ್‌ ತೂಗುದೀಪ 'ಡೆವಿಲ್‌' ಹೇಗಿದೆ? ಡೆವಿಲ್‌ನಲ್ಲೂ ಗಿಲ್ಲಿ ನಟನ ಭರ್ಜರಿ ಕಾಮಿಡಿ
ಗಳಗಳನೆ ಅತ್ತ ಕಾವ್ಯಾ; ಟಾಸ್ಕ್‌ ಗೆದ್ದ ಗಿಲ್ಲಿ, ಸ್ನೇಹದಲ್ಲಿ ಸೋತ!