
ಬೆಂಗಳೂರು (ಡಿ.07): ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಸಂಹಾರ ಸಿನಿಮಾ ಶೂಟಿಂಗ್ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾವನ್ನ ಕೈಗೆ ಎತ್ತಿಕೊಂಡಿದ್ದಾರೆ.
'ರಾಜಾಮಾರ್ತಾಂಡ' ಅಂತ ಪವರ್ ಫುಲ್ ಟೈಟಲ್ ಇಟ್ಟುಕೊಂಡು ಬರುತ್ತಿರೋ ಈ ಚಿತ್ರದ ಮುಹೂರ್ತ ಇತ್ತೀಚಿಗೆ ರಾಮಕೃಷ್ಣ ರಸ್ತೆಯಲ್ಲಿ ವಿನಾಯಕನ ದೇವಸ್ಥಾನದಲ್ಲಿ ಮಾಡಲಾಯಿತು. ಚಿರಂಜೀವಿ ಸರ್ಜಾ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದು ನಿರ್ದೇಶಕ ಕೆ ರಾಮ್ ನಾರಯಣ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಜಿತ್ ಸಿನಿಮಾ ನಿರ್ಮಾಪಕರಾಗಿದ್ದು, ಶಿವಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.