
ಬೆಂಗಳೂರು(ಡಿ.23): ಪುನೀತ್' ರಾಜ್'ಕುಮಾರ್ ಅಭಿನಯದ ಅಂಜನಿಪುತ್ರ ಸಿನಿಮಾ ಪ್ರದರ್ಶಿಸದಂತೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ವಕೀಲರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನ ಕ್ಕೆ ತಡೆ ನೀಡಬೇಕೆಂದು 40ನೇ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಚಲನಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಕೋರ್ಟ್ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ಮಾಪಕ, ನಿರ್ದೇಶಕರಿಗೆ ನೋಟಿಸ್ ನೀಡಲಾಗಿದೆ. ವಿಜಯ್ ಕುಮಾರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೋರ್ಟ್ ತಡೆ ನೀಡಿರುವುದರಿಂದ ಅಂಜನಿಪುತ್ರನಿಗೆ ಸಿನಿಮಾಗೆ ದೊಡ್ಡ ವಿಘ್ನ ಉಂಟಾಗಿದೆ. ಕೋರ್ಟ್ ಪ್ರತಿ ನಮ್ಮ ಕೈಗೆ ದೊರಕಿಲ್ಲ ಪ್ರತಿ ಬಂದಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮನರಂಜನೆ ನೀಡುವ ನೆಪದಲ್ಲಿ ಬೇರೆಯವ ಜೀನವದಲ್ಲಿ ಆಟವಾಡಬಾರದು ಎಂದು ಅರ್ಜಿದಾರ ವಿಜಯ್ ಕುಮಾರ್ ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ.
http://kannada.asianetnews.com/news/anjaniputra-movie-photo-gallery/
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.