‘ಮಾದೇಶ್ವರ’ ಧಾರಾವಾಹಿಗೆ ಎದುರಾಯ್ತು ಸಂಕಷ್ಟ

Published : Jan 03, 2019, 10:25 AM IST
‘ಮಾದೇಶ್ವರ’ ಧಾರಾವಾಹಿಗೆ ಎದುರಾಯ್ತು ಸಂಕಷ್ಟ

ಸಾರಾಂಶ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯ ಪ್ರಸಾರವನ್ನು ಸ್ಥಗಿತಗೊಳಿಸಿ, ತಕ್ಷಣ ವಾಹಿನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಬಸವ ದಳದ ಕಾರ್ಯಾಧ್ಯಕ್ಷರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 

ಚಾಮರಾಜನಗರ: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯ ಪ್ರಸಾರವನ್ನು ಸ್ಥಗಿತಗೊಳಿಸಿ, ತಕ್ಷಣ ವಾಹಿನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಬಸವ ದಳದ ಕಾರ್ಯಾಧ್ಯಕ್ಷ ಸು.ಮಲ್ಲಿಕಾರ್ಜುನಸ್ವಾಮಿ ಅವರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

 ಮಾದೇಶ್ವರರು ಬಸವಣ್ಣನ ನಂತರ ಇಷ್ಟಲಿಂಗತತ್ವದ ಲಿಂಗಾಯತ ಧರ್ಮವನ್ನು ಬೆಳಕಿಗೆ ತಂದವರು. ಮಾದೇಶ್ವರ ಬೆಟ್ಟದಲ್ಲಿ ಸೋಲಿಗರು, ಜೇನುಕುರುಬರು, ಬೇಡರಿಗೆ ಕೃಷಿ ಕಾಯಕ ಕಲಿಸಿ, ಉದ್ಯೋಗ, ಜಾತಿ, ಲಿಂಗ ಭೇದಗಳಿಲ್ಲದೇ ಅವರನ್ನು ಇಷ್ಟಲಿಂಗಾಧಾರಿಗಳನ್ನಾಗಿ ಮಾಡಿದರು.

 ಮಾದೇಶ್ವರರ ಕೊರಳಿನಲ್ಲಿ ಸದಾ ಇಷ್ಟಲಿಂಗವಿರುತ್ತಿತ್ತು. ಅವರ ಭಾವಚಿತ್ರಗಳಲ್ಲಿ ಕೊರಳಲ್ಲಿ ಇಷ್ಟಲಿಂಗ, ಹಣೆಯಲ್ಲಿ ವಿಭೂತಿ ಈಗಲೂ ಇದೆ. ಹೀಗಿದ್ದರೂ ಧಾರಾವಾಹಿಯಲ್ಲಿ ಮಾದೇಶ್ವರ ಪಾತ್ರಧಾರಿಯ ಕೊರಳಲ್ಲಿ ಇಷ್ಟಲಿಂಗವಿಲ್ಲ. ಜೊತೆಗೆ ಹಣೆಯಲ್ಲಿ ವಿಭೂತಿ ಜೊತೆಗೆ ಕುಂಕುಮ ಹಚ್ಚಲಾಗಿದೆ. ಇದು ಶರಣ ಸಂಸ್ಕೃತಿಗೆ ವಿರುದ್ಧವಾದುದು ಎಂದು ದೂರಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

The Devil Movie: ಏನ್ರೀ ಹವಾ ಇದು... ಗಿಲ್ಲಿ ನಟ ಎಣ್ಣೆಯಲ್ಲಿ ಮುಖ ತೊಳ್ಕೊಂಡಿದ್ದಾರೆ ಎಂದ ವೀಕ್ಷಕರು
Cucumber-Sugar ತಿಂದ್ರೆ ಕಲ್ಲಂಗಡಿ ಟೇಸ್ಟ್, ಸೆಟ್ ನಲ್ಲಿ ರಾಘು ಮೇಲೆ ಝಾನ್ಸಿ ಪ್ರಯೋಗ