
ಅಮರಾವತಿ (ಡಿ. 24): ‘ಲಕ್ಷ್ಮೀ’ಸ್ ಎನ್ಟಿಆರ್’ ಚಿತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ವಿವಾದಾತ್ಮಕವಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಕರ್ನೂಲ್ ಶಾಸಕ ಎಸ್.ವಿ ಮೋಹನ್ ರೆಡ್ಡಿ ಶನಿವಾರವೇ ಈ ಸಂಬಂಧ ಕೇಸ್ ದಾಖಲಿಸಿದ್ದಾರೆ. ಲಕ್ಷ್ಮೀ’ಸ್ ಎನ್ಟಿಆರ್ ಚಿತ್ರದ ಗೀತೆಯೊಂದರಲ್ಲಿ ನಾಯ್ಡು ಅವರು ಟಿಡಿಪಿ ಸಂಸ್ಥಾಪಕ ಎನ್.ಟಿ. ರಾಮ್ರಾವ್ ಅವರ ಬೆನ್ನಿಗೆ ಚೂರಿ ಹಾಕಿ, ಅಧಿಕಾರಕ್ಕೆ ಬಂದರು ಎಂಬಂತೆ ಚಿತ್ರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ರೆಡ್ಡಿ ಆಗ್ರಹಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.