ಮತದಾರರಿಗೆ ಹಣದ ಆಮಿಷದ ಪ್ರಚೋದನೆ: ನಟ ಉಪೇಂದ್ರ ವಿರುದ್ಧ ಜೆಡಿಯು ದೂರು

Published : Nov 03, 2017, 05:13 PM ISTUpdated : Apr 11, 2018, 01:11 PM IST
ಮತದಾರರಿಗೆ ಹಣದ ಆಮಿಷದ ಪ್ರಚೋದನೆ: ನಟ ಉಪೇಂದ್ರ ವಿರುದ್ಧ ಜೆಡಿಯು ದೂರು

ಸಾರಾಂಶ

ದೂರು ಸ್ವೀಕರಿಸಿದ ಪೊಲೀಸರು ಈ ಬಗ್ಗೆ ಎಫ್‌ಐಆರ್ ದಾಖಲಿಸಿಲ್ಲ.

ಬೆಂಗಳೂರು(ನ.03): ಮತದಾರರಿಗೆ ಹಣದ ಆಮಿಷವೊಡ್ಡಿ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಚಿತ್ರನಟ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ (ಕೆಪಿಜೆಪಿ) ನಾಯಕ ಉಪೇಂದ್ರ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ನಗರ ಜೆಡಿಯು ಘಟಕವು ಗುರುವಾರ ದೂರು ದಾಖಲಿಸಿದೆ.

ಆದರೆ ದೂರು ಸ್ವೀಕರಿಸಿದ ಪೊಲೀಸರು ಈ ಬಗ್ಗೆ ಎಫ್‌ಐಆರ್ ದಾಖಲಿಸಿಲ್ಲ. ನಗರದ ಗಾಂಧಿ ಭವನದಲ್ಲಿ ಅ.31ರಂದು ಅಧಿಕೃತವಾಗಿ ತಮ್ಮ ಪಕ್ಷದ ಉದ್ಘಾಟನಾ ಸಮಾರಂಭದಲ್ಲಿ ‘ಬೇರೆ ಪಕ್ಷಗಳ ಮುಖಂಡರು ಹಣ ನೀಡಿದರೆ ಜನರು ಆ ಹಣ ಪಡೆಯಲಿ. ಅದು ಅವರದೇ ಹಣ ತಪ್ಪೇನಿಲ್ಲ’ ಎಂದು ಉಪೇಂದ್ರ ಹೇಳಿಕೆ ನೀಡಿದ್ದರು. ಈ ಮೂಲಕ ಹಣ ಪಡೆದು ಮತ ಹಾಕಲು ಅವರು ಪ್ರಚೋದನೆ ನೀಡಿದಂತಾಗಿದೆ. ಅಲ್ಲದೆ, ಹಣದ ಆಮಿಷಕ್ಕೆ ತಮ್ಮ ಬೆಂಬಲವಿದೆ ಎಂಬುದಾಗಿ ಹೇಳಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಎಸಗಿದ ಅಪಚಾರವಾಗಿದೆ ಎಂದು ಬೆಂಗಳೂರು ನಗರ ಜೆಡಿಯು ಘಟಕದ ಪ್ರಧಾನ ಕಾರ್ಯದರ್ಶಿ ನಾಗೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

ಮತದಾರರಿಗೆ ಪ್ರಚೋದನೆ ನೀಡಿದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ನಾಯಕರನ್ನು ಕಾನೂನಿನಡಿ ಬಂಧಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​
ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!