
ಬೆಂಗಳೂರು (ಸೆ. 19): ಕ್ರಿಕೆಟಿಗ ಶ್ರೀಶಾಂತ್ ಕ್ರಿಕೆಟ್ ಗಿಂತ ಹೆಚ್ಚಾಗಿ ವಿವಾದಗಳಿಂದಲೇ ಫೇಮಸ್ ಆದವರು. ಆಗಾಗ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ.
ಹಿಂದಿಯ ಬಿಗ್ ಬಾಸ್ ಸೀಸನ್ 12 ನಲ್ಲಿ ಶ್ರೀಶಾಂತ್ ಸ್ಪರ್ಧಿಯಾಗಿದ್ದಾರೆ. ಶೋ ವೇಳೆ ಬಿಬಿ ಪ್ರೆಸ್ ಕಾನ್ಫರೆನ್ಸ್ ಮಾಡುವ ಟಾಸ್ಕನ್ನು ಶ್ರೀಶಾಂತ್ ಗೆ ಕೊಡಲಾಗಿತ್ತು. ಆದರೆ ಅದನ್ನು ಮಾಡಲು ಶ್ರೀಶಾಂತ್ ನಿರಾಕರಿಸಿದರು. ಆಗ ಆ ಟಾಸ್ಕ್ ಮಾಡಲು ಪ್ರತಿಸ್ಪರ್ಧಿಯೊಬ್ಬರು ಮುಂದೆ ಬಂದಾಗ ತಾಳ್ಮೆ ಕಳೆದುಕೊಂಡ ಶ್ರೀಶಾಂತ್ ಅವರ ಮೇಲೆ ರೇಗಾಡಿದರು. ಬಿಗ್ ಬಾಸ್ ಬಾಗಿಲನ್ನು ಓಪನ್ ಮಾಡುವಂತೆ ಕಿರುಚಾಡಿದರು. ಮೈಕ್ ಹಾಕಿಕೊಳ್ಳಲು ನಿರಾಕರಿಸಿದರು. ಇವರ ವರ್ತನೆ ಬಿಗ್ ಬಾಸ್ ಮನೆಯ ಬೇರೆ ಸ್ಪರ್ಧಿಗಳಿಗೂ ಇರುಸು ಮುರುಸು ಉಂಟು ಮಾಡಿತು.
ಬಿಗ್ ಬಾಸ್ ಮನೆಯೊಳಗೆ ಹೋದ ಎರಡೇ ದಿನಕ್ಕೆ ವಿವಾದ ಮಾಡಿಕೊಂಡಿದ್ದಾರೆ. ಇವರ ವರ್ತನೆ ಹೀಗೆ ಮುಂದುವರೆದರೆ ಬೇಗ ಮನೆಯಿಂದ ಹೊರ ಬರುತ್ತಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ ಮನೆಯೊಳಕ್ಕೆ ಹೋಗುವ ಮುನ್ನ ನಾನು ಅಲ್ಲಿಂದ ಬೇಗ ಹೊರ ಬರುವುದಿಲ್ಲ. ನನಗೆ ಭರವಸೆಯಿದೆ, ನಾನು ಗ್ರಾಂಡ್ ಫಿನಾಲೆಯಿಂದಲೇ ಹೊರ ಬರುವುದು ಎಂದು ಶ್ರೀಶಾಂತ್ ಹೇಳಿದ್ದಾರೆ. ಮುಂದೇನಾಗುತ್ತೆ ಕಾದು ನೋಡಬೇಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.