
ರಾಯಚೂರು(ಡಿ.05): ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ನಟಿ ಪೂಜಾ ಗಾಂಧಿ ಸೋಮವಾರ ಇಲ್ಲಿನ ಎರಡನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರಾದರು.
ತೀರ್ಪು ಪ್ರಕಟಣೆಯನ್ನು ಡಿ.13ಕ್ಕೆ ಮುಂದೂಡಲಾಗಿದೆ ಎಂದು ವಕೀಲರು ತಿಳಿಸಿದರು. ಈ ನಡುವೆ ಸುದ್ದಿಗಾರರ ಜತೆ ಮಾತನಾಡಿದ ಪೂಜಾ, ಸದ್ಯಕ್ಕೆ ಮತ್ತೆ ರಾಜಕಾರಣಕ್ಕೆ ಬರುವ ಉದ್ದೇಶವಿಲ್ಲ. ಮದುವೆ ಬಗ್ಗೆ ಯೋಚಿಸುತ್ತಿದ್ದು, ಶೀಘ್ರ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಡಲಿದ್ದೇನೆ ಎಂದು ಹೇಳಿದರು. ದಂಡುಪಾಳ್ಯ-3 ಸಿನಿಮಾ ಈ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಈ ಸಿನಿಮಾ ಮೂಲಕ ಕ್ರೈಂ ಲೋಕದ ರೋಚಕ ಕತೆಯನ್ನು ತೆರೆದಿಡಲಾಗುವುದು ಎಂದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.