ಮೃತ ಅಭಿಮಾನಿಗೆ ದರ್ಶನ್ ಸಂತಾಪ

Published : Nov 01, 2018, 02:11 PM ISTUpdated : Nov 01, 2018, 02:21 PM IST
ಮೃತ ಅಭಿಮಾನಿಗೆ ದರ್ಶನ್ ಸಂತಾಪ

ಸಾರಾಂಶ

ಅಪಘಾತಕ್ಕೀಡಾದ ಅಭಿಮಾನಿಗೆ ಹಾಗೂ ಕುಟುಂಬಕ್ಕೆ ಟ್ವೀಟ್ ಮೂಲಕ ಚಾಲೆಂಜಿಂಗ್ ಸ್ಟಾರ್ ತೂಗುದೀಪ ದರ್ಶನ್ ಸಾಂತ್ವಾನ ಹೇಳಿದ್ದಾರೆ.

ಮೈಸೂರಿನಲ್ಲಿ ಕಾರು ಅಪಘಾತಕ್ಕೀಡಾಗಿ ದಾಸ ದರ್ಶನ್ ಇದೀಗ ತಾನೇ ಸುಧಾರಿಸಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಮೃತಪಟ್ಟ ಸುದ್ದಿ ತಿಳಿದ ದರ್ಶನ್, ಸಾವಿಗೆ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ಅಷ್ಟೇ ಅಲ್ಲ, ಗಾಡಿಯನ್ನು ದಯಮಾಡಿ ಅತೀ ಜಾಗರೂಕತೆಯಿಂದ ಚಲಾಯಿಸಿ ಎಂಬ ಸಂದೇಶವನ್ನೂ ನೀಡಿದ್ದಾರೆ. ಕೆಲವೊಮ್ಮೆ ದುರಾದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ. ಆದ್ದರಿಂದ ದೂರದ ಪ್ರಯಾಣಕ್ಕೆ ದ್ವಿ ಚಕ್ರ ವಾಹನಗಳನ್ನು ನಿಯಂತ್ರಿಸಿ ಎಂದು ರಿಕ್ವೆಸ್ಟ್ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ವಿದ್ಯುತ್ ಕಂಬಕ್ಕೆ ದರ್ಶನ್ ಕಾರು ಡಿಕ್ಕಿ ಹೊಡೆದ ಪರಿಣಾಮ, ಕೈಗೆ ಏಟು ಬಿದ್ದಿದ್ದು, ವಿಶ್ರಾಂತಿಯಲ್ಲಿದ್ದಾರೆ. ಇವರೊಂದಿಗೆ ಪಯಣಿಸುತ್ತಿದ್ದ ಹಿರಿಯ ನಟ ದೇವರಾಜ್ ಹಾಗೂ ಪ್ರಜ್ವಲ್‌ಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್‌ ತೂಗುದೀಪ The Devil Movie ವಿಮರ್ಶೆ ಮಾಡೋ ಹಾಗಿಲ್ಲ, ಕಾಮೆಂಟ್ಸ್‌ ಮಾಡಂಗಿಲ್ಲ: ಕೋರ್ಟ್‌ನಿಂದ ತಡೆ
1000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಡೆವಿಲ್ ರಿಲೀಸ್: ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್‌