ಕುರುಕ್ಷೇತ್ರದಿಂದ ಚಾಲೆಂಜಿಂಗ್ ಸ್ಟಾರ್ ಔಟ್ !

Published : Jun 30, 2017, 07:29 PM ISTUpdated : Apr 11, 2018, 12:45 PM IST
ಕುರುಕ್ಷೇತ್ರದಿಂದ ಚಾಲೆಂಜಿಂಗ್ ಸ್ಟಾರ್ ಔಟ್ !

ಸಾರಾಂಶ

ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು, ಈ ಸಿನಿಮಾದಲ್ಲಿ ನಟಿಸಿದ್ದರೆ ದರ್ಶನ್'ಅವರ 50ನೇ ಸಿನಿಮಾವಾಗುತ್ತಿತ್ತು.  

ಸ್ಯಾಂಡಲ್'ವುಡ್'ನ ಭಾರಿ ಬಜೆಟ್'ನ ಚಿತ್ರವೆಂದೆ ಪರಿಗಣಿಸಿರುವ ಕುರುಕ್ಷೇತ್ರ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾವು ಈ ಪೌರಾಣಿಕ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಕೆಲ ವರದಿಗಳ ಪ್ರಕಾರ ಸಿನಿಮಾದ ತಾರಾಗಣವನ್ನು ಅಂತಿಮಗೊಳಿಸದ ಕಾರಣದಿಂದ ಟೀಮ್ ಬಗ್ಗೆ ಬೇಸರಗೊಂಡಿದ್ದು, ಸಿನಿಮಾದಿಂದ ಹೊರಗುಳಿಯಲು ಕಾರಣ ಎಂದು ತಿಳಿದುಬಂದಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು, ಈ ಸಿನಿಮಾದಲ್ಲಿ ನಟಿಸಿದ್ದರೆ ದರ್ಶನ್'ಅವರ 50ನೇ ಸಿನಿಮಾವಾಗುತ್ತಿತ್ತು.  

ದರ್ಶನ್ ಈ ಸಿನಿಮಾದಲ್ಲಿ ನಟಿಸುವ ಸಲುವಾಗಿಯೇ ಫೋಟೊ ಶೂಟ್'ನಲ್ಲಿಯೂ ಭಾಗವಹಿಸಿದ್ದರು. ಪ್ರಸ್ತುತ ದರ್ಶನ್ ಅವರು ತಾರಕ್ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರೀಕರಣ ಕೂಡ ನಡೆಯುತ್ತಿದೆ. ಇದಕ್ಲಿಂತ ಮೊದಲು ರೆಬಲ್ ಸ್ಟಾರ್ ಅಂಬರೀಶ್ ಕೂಡ ತಾವು ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ತಿಳಿಸಿದ್ದರು. ಈಗ ದರ್ಶನ್ ಕೂಡ ಹೊರಗುಳಿದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​
ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!