ಯಜಮಾನದಲ್ಲಿ ನಾನು ವಿಲನ್ ಅಲ್ಲ: ಧನಂಜಯ್

Published : Feb 12, 2019, 09:55 AM IST
ಯಜಮಾನದಲ್ಲಿ ನಾನು ವಿಲನ್ ಅಲ್ಲ: ಧನಂಜಯ್

ಸಾರಾಂಶ

‘ಟಗರು’ ಚಿತ್ರ ಬಂದ ಮೇಲೆ ಧನಂಜಯ್ ಲಕ್ ಬದಲಾಯಿತು. ಎಲ್ಲೆಡೆ ಡಾಲಿ ಧನಂಜಯ್ ಎಂದೇ ಖ್ಯಾತರಾಗಿ ಎಲ್ಲರ ಬಾಯಿಯಲ್ಲೂ ಪ್ರೀತಿಯ ಡಾಲಿಯಾಗಿದ್ದಲ್ಲದೇ ಸಖತ್ ಬ್ಯುಸಿ ಆಗಿದ್ದಾರೆ. 

ಆದರೆ ಈಗ ನಯಾ ಸಮಾಚಾರ ಏನೆಂದರೆ ‘ಡಾಲಿ’ ಹೆಸರಿನಲ್ಲೇ ಪ್ರಭು ಶ್ರೀನಿವಾಸ್ ನಿರ್ದೇಶನದಲ್ಲಿ ಚಿತ್ರ ಸೆಟ್ಟೇರಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯೋಗೇಶ್ ನಿರ್ಮಾಣ ಮಾಡುತ್ತಿರುವ ಚಿತ್ರ ಇದೇ ವಾರದಲ್ಲಿ ಟೈಟಲ್ ಲಾಂಚ್ ಮಾಡಿಕೊಳ್ಳುವ ತಯಾರಿ ನಡೆಸಿದೆ. ಈ ನಿಟ್ಟಿನಲ್ಲಿ ಸ್ಕ್ರಿಪ್ಟ್ ವರ್ಕ್ ಭರದಿಂದ ಸಾಗುತ್ತಿದ್ದು, ನಾಯಕಿಯ ಹುಡುಕಾಟ ನಡೆದಿದೆ.

ಯಜಮಾನದಲ್ಲಿ ಮಿಠಾಯಿ ಸೂರಿ:

ದರ್ಶನ್ ಅಭಿನಯದ ‘ಯಜಮಾನ’ ಚಿತ್ರದಲ್ಲಿ ಮೇನ್ ವಿಲನ್ ಆಗಿ ಧನಂಜಯ್ ಕಾಣಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ವತಃ ಸ್ಪಷ್ಟನೆ ನೀಡಿದ ಧನಂಜಯ್ ‘ನನ್ನದು ಬಹಳ ಮುಖ್ಯವಾದ ಪಾತ್ರ. ಆದರೆ ವಿಲನ್ ಅಲ್ಲ. ಮಿಠಾಯಿ ಸೂರಿಯಾಗಿ ಚಿತ್ರದಲ್ಲಿ ಸ್ವಲ್ಪ ಸಮಯ ಬಂದು ಹೋದರೂ ಬಹಳ ಪ್ರಾಮುಖ್ಯತೆ ನನ್ನ ಪಾತ್ರಕ್ಕೆ ಇದೆ’ ಎಂದು ಹೇಳಿಕೊಂಡರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್