ನಟರಿಬ್ಬರ ವಿವಾದದ ನಂತರ ಈಗ ಶುರುವಾಗಿದೆ ನಿರ್ದೇಶಕ, ನಿರ್ಮಾಪಕರ ಜಗಳ

Published : Mar 07, 2017, 12:54 PM ISTUpdated : Apr 11, 2018, 01:12 PM IST
ನಟರಿಬ್ಬರ ವಿವಾದದ ನಂತರ ಈಗ ಶುರುವಾಗಿದೆ ನಿರ್ದೇಶಕ, ನಿರ್ಮಾಪಕರ ಜಗಳ

ಸಾರಾಂಶ

ನಾಲ್ಕು ವರ್ಷದಿಂದ ಒತ್ತಡದಲ್ಲೇ ಜೀವನ ಸಾಗಿಸಿದ್ದೇನೆ. ತುಂಬಾ‌ ದುಃಖದಿಂದ‌ ಸಿನಿಮಾವನ್ನು ಹಿಂಪಡೆಯುತ್ತಿದ್ದೇನೆ. ಈ ಕುರಿತು ನಾಳೆ ವಾಣಿಜ್ಯ ಮಂಡಳಿಯಲ್ಲಿ ಸಭೆ ಇದೆ. ಸಭೆಯ ನಂತರ ಸಿನಿಮಾ ಬಿಡುಗಡೆಗೆ ನಿರ್ಧಾರ ಮಾಡುತ್ತೇವೆ'

ಬೆಂಗಳೂರು(ಮಾ.07): ಕಳೆದೆರಡು ದಿನಗಳಿಂದ ದರ್ಶನ್ ಹಾಗೂ ಸುದೀಪ್ ಟ್ವಿಟರ್ ವಿವಾದ ಗಾಂಧಿನಗರದಾದ್ಯಂತ ಸುದ್ದಿಯಾಗಿದೆ. ನಮ್ಮಿಬ್ಬರ ಸ್ನೇಹ ಮುಗಿದ ಅಧ್ಯಾಯ ಎಂದು ದರ್ಶನ್ ಹೇಳಿದ ನಂತರ ಸುದೀಪ್ ಯಾವುದೇ ಹೇಳಿಕೆಯನ್ನು ನೀಡದೆ ಅಂತರವನ್ನು ಕಾಯ್ದುಕೊಂಡಿದ್ದರು.

ಈಗ ಮತ್ತೊಂದು ಜಗಳ ಶುರುವಾಗಿದ್ದು, ಅದು ನಿರ್ಮಾಪಕ ಹಾಗೂ ನಿರ್ದೇಶಕರ ನಡುವೆ. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಹಾಗೂ ನಿರ್ಮಾಪಕ ಯೋಗಿಶ್ ನಾರಾಯಣ್ ನಡುವೆ. ಗುರುಪ್ರಸಾದ್ ನಿರ್ದೇಶನದ 'ಎರಡನೇ ಸಲ' ಚಿತ್ರವನ್ನು ಯೋಗೀಶ್ ನಾರಾಯಣ್ ನಿರ್ಮಿಸಿದ್ದರು.

ಇಬ್ಬರ ನಡುವೆ ಮನಸ್ಥಾಪ ಉಂಟಾಗಿರುವ ಕಾರಣ ನಿರ್ಮಾಪಕ ಯೋಗೀಶ್ ನಾರಾಯಣ್ ರಾಜ್ಯದಾದ್ಯಂತ ಪ್ರದರ್ಶನವಾಗುತ್ತಿರುವ 'ಎರಡನೆ ಸಲ' ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಮಾರ್ಚ್ 3ರಂದು ರಾಜ್ಯದಾದ್ಯಂತ ಚಿತ್ರ ಬಿಡುಗಡೆಯಾಗಿತ್ತು.

'ಗುರುಪ್ರಸಾದ್ ಯಾವುತ್ತಿಗೂ ಎರಡನೆ ಸಲ ಚಿತ್ರದ ನಿರ್ಮಾಪಕರಲ್ಲ. ಅವರಿಂದ ಸಿನಿಮಾ ಅರ್ಧ ಸತ್ತಿದೆ. ಮಾರ್ಚ್​ 3ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಿತ್ತು. ನಿರ್ದೇಶಕ ಗುರುಪ್ರಸಾದ್ ಪ್ರಚಾರಕ್ಕೆ ಬಂದಿರಲಿಲ್ಲ. ನಾಲ್ಕು ವರ್ಷದಿಂದ ಒತ್ತಡದಲ್ಲೇ ಜೀವನ ಸಾಗಿಸಿದ್ದೇನೆ. ತುಂಬಾ‌ ದುಃಖದಿಂದ‌ ಸಿನಿಮಾವನ್ನು ಹಿಂಪಡೆಯುತ್ತಿದ್ದೇನೆ. ಈ ಕುರಿತು ನಾಳೆ ವಾಣಿಜ್ಯ ಮಂಡಳಿಯಲ್ಲಿ ಸಭೆ ಇದೆ. ಸಭೆಯ ನಂತರ ಸಿನಿಮಾ ಬಿಡುಗಡೆಗೆ ನಿರ್ಧಾರ ಮಾಡುತ್ತೇವೆ' ಎಂದು ಸುದ್ದಿಗೋಷ್ಠಿಯಲ್ಲಿ  ತಿಳಿಸಿದ್ದಾರೆ.

ನಟ ಧನಂಜಯ, ನಟಿ ಸಂಗೀತ ಭಟ್ ಉಪಸ್ಥಿತರಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ದೃಷ್ಟಿಬೊಟ್ಟು' ಮೂಲಕ ಕನ್ನಡಿಗರ ಮನಗೆದ್ದ ಅರ್ಪಿತಾ ಮೋಹಿತೆ ಈಗ ತೆಲುಗು ಸೀರಿಯಲ್ ನಾಯಕಿ
ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ: ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?