
ವಿಜಯಪುರ(ಮೇ.18):ಡಿಹೈಡ್ರೇಷನ್ ನಿಂದ ಬಳಲುತ್ತಿರುವ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೆಲುಗು ಚಿತ್ರದ ಚಿತ್ರೀಕರಣದ ಸಲುವಾಗಿ ನಿನ್ನೆ ಬೆಂಗಳೂರಿನಿಂದ ವಿಜಯಪುರಕ್ಕೆ ಚಿತ್ರೀಕರಣಕ್ಕೆ ಬಂದಿದ್ದರು.
ನಗರದಿಂದ 40 ಕಿಮೀ ದೂರದ ಸೊಲ್ಹಾಪುರ ರಸ್ತೆಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣದ ವೇಳೆ ಅಲ್ಪ ಉಪಹಾರ ಸೇವಿಸಿದ್ದಾರೆ. ಆಹಾರ ಪಚನವಾಗದೆ ಬೇದಿಯಾಗಿದೆ ಜೊತೆಗೆ ಕಾಲುಗಳು ಊತುಕೊಂಡವು. ಪ್ರಸ್ತುತ ನಗರದ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಏರ್ ಅಂಬ್ಯಲೆನ್ಸ್ ನಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ದೊಡ್ಡಣ್ಣ ಸಂಬಂಧಿಗಳ ಜತೆ ವೈದ್ಯರು ಚರ್ಚೆ ನಡೆಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.