ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಿಂದ ಮಹತ್ವಪೂರ್ಣ ನಿರ್ಧಾರ

By Web DeskFirst Published Aug 15, 2018, 2:03 PM IST
Highlights

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಹೊಸ ಪ್ರಯತ್ನಕ್ಕೆ ಮುಂದಾಗಿದೆ.  ಕೆಲ ದಿನಗಳ ಹಿಂದೆ ನಿರ್ದೇಶಕ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನೂತನವಾಗಿ  ಆಯ್ಕೆಯಾದ ವಿ ನಾಗೇಂದ್ರ ಪ್ರಸಾದ್ ಹಾಗೂ ಸಾಧು ಕೋಕಿಲರವರು ಮಹತ್ವಪೂರ್ಣ ನಿರ್ಧಾರ ತೆಗೆದುಕೊಂಡಿದ್ದಾರೆ. 

ಬೆಂಗಳೂರು (ಆ. 15): ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಹೊಸ ಪ್ರಯತ್ನಕ್ಕೆ ಮುಂದಾಗಿದೆ. 

ಕೆಲ ದಿನಗಳ ಹಿಂದೆ ನಿರ್ದೇಶಕ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನೂತನವಾಗಿ  ಆಯ್ಕೆಯಾದ ವಿ ನಾಗೇಂದ್ರ ಪ್ರಸಾದ್ ಹಾಗೂ ಸಾಧು ಕೋಕಿಲರವರು ಮಹತ್ವಪೂರ್ಣ ನಿರ್ಧಾರ ತೆಗೆದುಕೊಂಡಿದ್ದಾರೆ. 

ನಿರ್ದೇಶಕ ಸಂಘದಲ್ಲಿ ಇನ್ಮುಂದೆ ಸಹ ನಿರ್ದೇಶಕರಿಗೆ ಸದಸ್ಯತ್ವ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಹಾಯ ನಿರ್ದೇಶಕರಿಗೆ ಜನರಲ್ ಬಾಡಿ ಮೀಟಿಂಗ್ ನಡೆಸಲಾಗುತ್ತದೆ.  ಈ ಮೀಟಿಂಗ್ ನಲ್ಲಿ ಸಹ ಮತ್ತು ಸಹಾಯ ನಿರ್ದೇಶಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ನಾಗೇಂದ್ರ ಪ್ರಸಾದ್ ಹಾಗೂ ಸಾಧು ಕೋಕಿಲ ಹೇಳಿದ್ದಾರೆ. 

"

 

click me!