
ದುಬೈ(ನ.05): ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನ ನಾಳೆ ದುಬೈನಲ್ಲಿ ಅನಾವರಣಗೊಳಿಸಲಾಗುತ್ತಿದೆ. ದುಬೈನಲ್ಲಿರುವ ಅನಿವಾಸಿ ಭಾರತೀಯರು ಮೊದಲ ಬಾರಿಗೆ ಅರಬ್ ರಾಷ್ಟ್ರದಲ್ಲಿ ಗಾಂಧಿ ಪ್ರತಿಮೆಯನ್ನ ಅನಾವರಣ ಮಾಡಲು ಮುಂದಾಗಿದ್ದು, ಅರಬ್ ಧಿಕಾರಿಗಳು ಅನುಮತಿ ನೀಡಿದ್ದಾರೆ.
ಬೆಂಗಳೂರಿನ ಗಾಂಧಿಭವನದಿಂದ ಮೂರು ಅಡಿ ಎತ್ತರದ ಗಾಂಧೀಜಿಯವರ ಫೈಬರ್ ಪ್ರತಿಮೆಯನ್ನ ನಿನ್ನೆಯೇ ವಿಮಾನದ ಮೂಲಕ ದುಬೈಗೆ ಸಾಗಿಸಲಾಯ್ತು. ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಗಾಂಧೀಜಿಯವರ ಈ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ದುಬೈನಲ್ಲಿರುವ ಕನ್ನಡಿಗರು,ಭಾರತೀಯರು ಸೇರಿದಂತೆ ಅರಬ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.