ಅವಕಾಶಕ್ಕಾಗಿ ಮೂರು ವರ್ಷ ಅಲೆದಿದ್ದರು ‘ಕಹಾನಿ’ ನಟಿ!

Published : Aug 14, 2019, 10:53 AM IST
ಅವಕಾಶಕ್ಕಾಗಿ ಮೂರು ವರ್ಷ ಅಲೆದಿದ್ದರು  ‘ಕಹಾನಿ’ ನಟಿ!

ಸಾರಾಂಶ

ಅವಕಾಶ ಎನ್ನುವುದು ಯಾರನ್ನೂ ಹುಡುಕಿಕೊಂಡು ಬರುವುದಿಲ್ಲ. ಅವಕಾಶಕ್ಕಾಗಿ ಹೋರಾಟ ಮಾಡಬೇಕಾಗುತ್ತದೆ. ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕೆ ಸಿನಿಮಾ ಸೆಲಬ್ರಿಟಿಗಳು ಹೊರತಲ್ಲ. ನಟಿ ವಿದ್ಯಾ ಬಾಲನ್ ತಮ್ಮದ ಕಷ್ಟದ ದಿನಗಳನ್ನು ನೆನೆಸಿಕೊಂಡಿದ್ದಾರೆ. 

ಆ.15 ರಂದು ವಿದ್ಯಾಬಾಲನ್‌ ಸೇರಿ ಬಹುತಾರಾಗಣದ ನಿರೀಕ್ಷೆಯ ಚಿತ್ರ ‘ಮಿಷನ್‌ ಮಂಗಲ್‌’ ಬಿಡುಗಡೆಗೆ ಸಿದ್ಧವಾಗಿದೆ. ಇಂತ ಹೊತ್ತಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ವಿದ್ಯಾಬಾಲನ್‌ ಕಣ್ಣೀರಿನ ಕತೆಯೊಂದನ್ನು ಹೇಳಿದ್ದಾರೆ. ಇದು ಅವರದ್ದೇ ಬದುಕಿನ ಮೂರು ವರ್ಷಗಳ ಕಣ್ಣೀರಿನ ಕತೆ. ಕೇಳಿ ಅವರ ಮಾತಲ್ಲಿಯೇ.

ತಂದೆ ತೀರಿಕೊಂಡಿದ್ದು ತಿಳಿದರೂ ಗಿಮಿಕ್‌ ಶೂಟಿಂಗ್‌ ಮುಗಿಸಿಕೊಟ್ಟ ಗಣೇಶ್‌

‘ನಾನು ಸಿನಿಮಾ ಹಿನ್ನೆಲೆಯ ಕುಟುಂಬದಿಂದ ಬಂದವಳಲ್ಲ. ನನಗೆ ಸಿನಿಮಾ ಎಂದರೆ ಏನು? ನಟಿಸಲು ಅವಕಾಶ ಪಡೆಯುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಲ್ಲಿಗೆ ಹೋಗಬೇಕು? ಎನ್ನುವ ಸಾಮಾನ್ಯ ಸಂಗತಿಗಳೂ ತಿಳಿದಿರಲಿಲ್ಲ.

ಒಂದು ಕಡೆ ಮನೆಯ ಜವಾಬ್ದಾರಿ, ಮತ್ತೊಂದು ಕಡೆ ಸಿನಿಮಾ ಪ್ರೀತಿ. ಇವೆರಡನ್ನೂ ಬ್ಯಾಲೆನ್ಸ್‌ ಮಾಡಿಕೊಂಡು ಹೋಗುತ್ತೇನೆ ಎನ್ನುವ ಧೈರ್ಯದೊಂದಿಗೆ ಬಣ್ಣದ ಲೋಕಕ್ಕೆ ಬಂದೆ. ಆದರೆ ನನ್ನ ಮೊದಲ ಮೂರು ವರ್ಷದ ಹಾದಿ ಕಣ್ಣೀರು ಮತ್ತು ಹೋರಾಟದ್ದೇ ಆಗಿತ್ತು. ಇಡೀ ದಿನ ಅವಕಾಶಕ್ಕಾಗಿ ಹುಡುಕಾಡುತ್ತಿದ್ದೆ.

‘ಪ್ರೇಮಲೋಕ’ ಕ್ಕೆ ಮಲ್ಲಿಕಾ ಎಂಬ ಮೋಹಕ ಚೆಲುವೆ ಎಂಟ್ರಿ!

ರಾತ್ರಿ ಮನೆಗೆ ಬಂದು ಕಣ್ಣೀರು ಹಾಕುತ್ತಾ ಮಲಗುತ್ತಿದ್ದೆ. ಮತ್ತೆ ಬೆಳಿಗ್ಗೆ ಕೆನ್ನೆಯ ಮೇಲಿದ್ದ ಕಣ್ಣೀರಿನ ಗೆರೆಗಳನ್ನು ಒರೆಸಿಕೊಂಡು ಹೊಸ ಉತ್ಸಾಹದೊಂದಿಗೆ ಮತ್ತೆ ಅವಕಾಶಗಳ ಬೇಟೆ ಶುರುವಾಗುತ್ತಿತ್ತು. ಬಹುಶಃ ಈ ಉತ್ಸಾಹವೇ ನನ್ನನ್ನು ಈ ಹಂತಕ್ಕೆ ತಂದಿದೆ ಎಂದರೆ ಸುಳ್ಳಲ್ಲ’. ವಿದ್ಯಾಬಾಲನ್‌ ಈ ಮಾತುಗಳು ಅವರ ಹೋರಾಟದ ಹಾದಿಯ ಸಣ್ಣ ಝಲಕ್‌ ಅಷ್ಟೆ.


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!