ಆಗಸ್ಟ್‌ 3, 4ರಂದು ಕನ್ನಡ ಕೋಗಿಲೆ ರಿಯಾಲಿಟಿ ಶೋ ಫೈನಲ್‌!

Published : Aug 03, 2019, 09:54 AM IST
ಆಗಸ್ಟ್‌ 3, 4ರಂದು ಕನ್ನಡ ಕೋಗಿಲೆ ರಿಯಾಲಿಟಿ ಶೋ ಫೈನಲ್‌!

ಸಾರಾಂಶ

ಕನ್ನಡಿಗರ ಮನ ಗೆದ್ದಿರುವ ಕಲರ್ಸ್‌ ಸೂಪರ್‌ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕನ್ನಡ ಕೋಗಿಲೆ ಸೀಸನ್‌ 2 ಈಗ ಅಂತಿಮ ಹಂತ ತಲುಪಿದೆ. ಒಟ್ಟು ಆರು ಸ್ಪರ್ಧಿಗಳುಳ್ಳ ಈ ಕಾರ್ಯಕ್ರಮದ ಫೈನಲ್‌ ಆಗಸ್ಟ್‌ 3 ಮತ್ತು 4ರಂದು ರಾತ್ರಿ 8ರಿಂದ ಕಲರ್ಸ್‌ ಸೂಪರ್‌ನಲ್ಲಿ ಪ್ರಸಾರವಾಗಲಿದೆ.

ಕನ್ನಡ ಹಾಡುಗಳ ಜುಗಲ್‌ಬಂದಿಯ ಫೈನಲ್‌ ಹಂತದಲ್ಲಿ ಮೈಸೂರಿನ ಆಲಾಪ್‌, ಕೊಪ್ಪಳದ ಏಳು ವರ್ಷದ ಅರ್ಜುನ್‌ ಇಟಗಿ, ಉಡುಪಿಯ ಕಲಾವತಿ ದಯಾನಂದ್‌, ಹಾವೇರಿಯ ಖಾಸಿಂ, ಬೆಂಗಳೂರಿನ ನೀತು ಸುಬ್ರಹ್ಮಣ್ಯಂ ಮತ್ತು ಶಿವಮೊಗ್ಗದ ಪಾರ್ಥ ಕನ್ನಡ ಕೋಗಿಲೆ ಕಿರೀಟಕ್ಕಾಗಿ ಸೆಣೆಸಲಿದ್ದಾರೆ.

ಆರ್ ಜೆ ಸಿರಿ ಫೋಟೋಗಳು ಸಖತ್ ಹಾಟ್ ಮಗಾ!

ಸಂಗೀತ ಪ್ರಿಯರ ಮನಗೆದ್ದಿರುವ ಕನ್ನಡ ಕೋಗಿಲೆ ರಿಯಾಲಿಟಿ ಶೋ, ಪ್ರೇಕ್ಷಕರಿಗೆ ವೈವಿಧ್ಯಮಯ ಹಾಗೂ ಮನಮೋಹಕ ಹಾಡುಗಳನ್ನು ಉಣಬಡಿಸುತ್ತಿದೆ. ಇಲ್ಲಿ ವಯಸ್ಸಿನ ಮಿತಿ ಇಲ್ಲ. ಸಂಗೀತದ ಗುಣಮಟ್ಟದ ವಿಷಯದಲ್ಲಿ ಇನ್ನೂ ಒಂದು ಹೆಜ್ಜೆ ಮುಂದಿದ್ದು, ಶೋ ನಡೆಯುವಾಗಲೇ ಇಲ್ಲಿನ ಸ್ಪರ್ಧಿಗಳು ಸಿನಿಮಾ ಹಾಡುಗಳಿಗೆ ದನಿ ನೀಡಿದ್ದಾರೆ.

ಸಂಗೀತ ಕಾರ್ಯಕ್ರಮ ಬೇಕು ಎಂಬ ವೀಕ್ಷಕರ ಬಹುದಿನಗಳ ಬೇಡಿಕೆಯನ್ನು ಕನ್ನಡ ಕೋಗಿಲೆ ಈಡೇರಿಸಿದೆ. ಗುಣಮಟ್ಟದ ಬಗ್ಗೆ ನನಗೆ ಹೆಮ್ಮೆ ಇದೆ. ರಾಜ್ಯದ ನಾನಾ ಭಾಗಗಳಿಂದ ಬೆಳಕಿಗೆ ಬಾರದ ಪ್ರತಿಭೆಗಳನ್ನು ನಮ್ಮ ತಂಡ ಹುಡುಕಿ ತಂದಿದೆ. ಗ್ರ್ಯಾಂಡ್‌ ಫಿನಾಲೆಯಲ್ಲಿ ಇನ್ನಷ್ಟುಮನರಂಜನೆ ಇರಲಿದೆ. - ಪರಮೇಶ್ವರ ಗುಂಡ್ಕಲ್‌

ರಿಯಾಲಿಟಿ ಶೋನ ತೀರ್ಪುಗಾರರಾಗಿ ಸಾಧು ಕೋಕಿಲ, ಅರ್ಚನಾ ಉಡುಪ ಮತ್ತು ಚಂದನ್‌ ಶೆಟ್ಟಿ ಸ್ಪರ್ಧಿಗಳ ಬೆನ್ನುತಟ್ಟುತ್ತಿದ್ದು, ಆರ್‌ಜೆ ಸಿರಿ ನಡೆಸಿಕೊಡುತ್ತಿದ್ದಾರೆ. ಈ ಸೀಸನ್‌ನಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಅಭಿಷೇಕ್‌ ಅಂಬರೀಷ್‌, ರಾಕ್‌ಲೈನ್‌ ವೆಂಕಟೇಶ್‌, ದೊಡ್ಡಣ್ಣ, ಅನೂಪ್‌ ಸೀಳಿನ್‌, ಕವಿ ದೊಡ್ಡರಂಗೇಗೌಡ ಅತಿಥಿಗಳಾಗಿ ಆಗಮಿಸಿ ಸ್ಪರ್ಧಿಗಳನ್ನು ಹುರಿದುಂಬಿಸಿದ್ದಾರೆ. ಗ್ರ್ಯಾಂಡ್‌ ಫೈನಲ್‌ನಲ್ಲಿ ಸಂಗೀತ ಮಾಂತ್ರಿಕ ಗುರುಕಿರಣ್‌ ವಿಶೇಷ ತೀರ್ಪುಗಾರರಾಗಿ ಕಾಣಿಸಲಿದ್ದಾರೆ. ಈ ಆರು ಸ್ಪರ್ಧಿಗಳಲ್ಲಿ ಕನ್ನಡ ಕೋಗಿಲೆ ಸೀಸನ್‌ 2ನ ಕಿರೀಟ ಯಾರ ಮುಡಿಗೇರಲಿದೆ ಎನ್ನುವುದಕ್ಕೆ ಶನಿವಾರ ಹಾಗೂ ಭಾನುವಾರ ರಾತ್ರಿ 8 ಗಂಟೆಗೆ ಕಲರ್ಸ್‌ ಸೂಪರ್‌ ಚಾನೆಲ್‌ನಲ್ಲಿ ಗೊತ್ತಾಗಲಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Karna Serial ನಿಧಿ ಅರೆಸ್ಟ್​: ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದೇಕೆ? ಅಷ್ಟಕ್ಕೂ ಆಗಿದ್ದೇನು?
ಅಬ್ಬಬ್ಬಾ! ಟ್ವಿಸ್ಟ್‌ ಅಂದ್ರೆ ಇದಪ್ಪಾ- ಎದ್ದು ಬಂದ ಸತ್ತ ಸಂಧ್ಯಾ: ಲಾಯರ್‌ ಭಾರ್ಗವಿನೇ ಜೈಲಿಗೆ ಹೋಗ್ತಾಳಾ?