
ದೆವ್ವದ ಚಿತ್ರಕ್ಕೂ ವೀರೇಂದ್ರ ಹೆಗ್ಗಡೆ ಅವರಿಗೂ ಏನು ನಂಟು ಎಂದರೆ ಅದಕ್ಕೆ ಕಾರಣ ಈ ಚಿತ್ರದ ನಿರ್ಮಾಪಕ ಅಶೋಕ್ ಭಾರದ್ವಾಜ್. ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಅಶೋಕ್ ಭಾರದ್ವಾಜ್ ಅವರ ಗುರುಗಳು. ಈ ಕಾರಣಕ್ಕೆ ಚಿತ್ರವನ್ನು ತಮ್ಮ ಗುರುಗಳ ಆಶೀರ್ವಾದದಿಂದಲೇ ಶುರು ಮಾಡಿದ್ದು, ಈಗ ಅವರಿಗಾಗಿಯೇ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದಾರೆ. ‘ನಾನು ತುಂಬಾ ನಂಬಿರುವುದು ಧರ್ಮಸ್ಥಳದ ಮಂಜುನಾಥ ಸ್ವಾಮಿಯನ್ನ. ಇದರ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆ ಅವರು ನನ್ನ ಗುರುಗಳು. ಸಿನಿಮಾ ಮಾಡುವಾಗ ಅವರ ಆಶೀರ್ವಾದ ಪಡೆದುಕೊಂಡಿದ್ದೆ. ಈ ಕಾರಣಕ್ಕೆ ಚಿತ್ರದ ಪೋಸ್ಟರ್ಗಳಲ್ಲೂ ಅವರ ಹೆಸರನ್ನೇ ಹಾಕಿರುವೆ. ನಮ್ಮ ಸಿನಿಮಾ ನೋಡುವಂತೆ ಅವರಲ್ಲಿ ಕೇಳಿಕೊಂಡಾಗ ಒಪ್ಪಿದ್ದಾರೆ. ಚಿತ್ರದ ಕತೆಯನ್ನು ಇಷ್ಟಪಟ್ಟು ಸಿನಿಮಾ ನೋಡಲು ಬರುತ್ತಿದ್ದಾರೆ’ ಎನ್ನುತ್ತಾರೆ ನಿರ್ಮಾಪಕರು.
ತೆರೆ ಮೇಲೆ ನಟಿ ಕಲ್ಪನಾ ಆತ್ಮ-ಕಥೆ!
ಈ ಚಿತ್ರವನ್ನು ನಿರ್ದೇಶಿಸಿರುವುದು ವಿಶ್ವ ಜಿ ಕಡೂರ್. ವಿಜಯ್ ರಾಮ್, ವೇದಾ ಹಾಗೂ ಆಶಿತ್ ಚಿತ್ರದ ಮುಖ್ಯ ಪಾತ್ರದಾರಿಗಳು. ಪ್ರಸ್ತುತ ಚಿತ್ರದ ಮ್ಯೂಸಿಕಲ್ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಕನ್ನಡದಲ್ಲಿ ಇದು ಮೊದಲ ಪ್ರಯೋಗ. ಈ ಟ್ರೇಲರ್ನಲ್ಲಿ ದೃಶ್ಯಗಳಿವೆ. ಆದರೆ, ಸಂಭಾಷಣೆ ಇಲ್ಲ. ಹಿನ್ನೆಲೆ ಸಂಗೀತದ ಮೂಲದ ಮೂಲಕವೇ ಎಲ್ಲವನ್ನೂ ಹೇಳುವ ಪ್ರಯತ್ನ ಮಾಡಲಾಗಿದೆ. ವೈ ಜೆ ಕೆ ಸಂಗೀತ ಸಂಯೋಜಿಸಿದ್ದಾರೆ. ಮನು ದಾಸಪ್ಪ ಕ್ಯಾಮೆರಾ, ಶಿವು ಶರಣಪ್ಪ ಸಂಭಾಷಣೆ ಈ ಚಿತ್ರಕ್ಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.