
ಬೆಂಗಳೂರು[ಜ. 24] ಮಗನ ಸಿನಿಮಾಗೆ ಖುದ್ದು ದೂರವಾಣಿ ಮೂಲಕ ಸಿಎಂ ಕುಮಾರಸ್ವಾಮಿ ಗಣ್ಯರಿಗೆ ಆಹ್ವಾನ ನೀಡಿದ್ದಾರೆ. ಪಕ್ಷತೀವಾಗಿ ಎಲ್ಲಾ ಶಾಸಕರಿಗೆ ಕರೆ ಮಾಡಿ ಹೆಚ್ ಡಿ ಕುಮಾರಸ್ವಾಮಿ ಅಹ್ವಾನ ನೀಡಿದ್ದಾರೆ.
ಬೆಂಗಳೂರಿನ ಒರಯಾನ್ ಮಾಲ್ನಲ್ಲಿ ಪ್ರೀಮಿಯರ್ ಶೋ ನಡೆಯುತ್ತಿದೆ. ಬಜೆಟ್ ಪೂರ್ವಭಾವಿ ಸಭೆಯ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡ ಸಿಎಂ ಶಾಸಕರನ್ನು ಆಹ್ವಾನಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ಕಂಕಣ ಭಾಗ್ಯ
ಈಶ್ವರಪ್ಪ. ಸೌಮ್ಯರೆಡ್ಡಿ. ಡಿಜಿ ನೀಲಾಮಣಿ. ಬಂಡೆಪ್ಪ ಕಾಶಂಪುರ್ ಸಿನಿಮಾ ವೀಕ್ಷಣೆಗೆ ಆಗಮಿಸಿದ್ದಾರೆ. ಎ. ಹರ್ಷ ನಿರ್ದೇಶನದ ಸಿನಿಮಾ ಸೀತಾರಾಮ ಕಲ್ಯಾಣದಲ್ಲಿ ನಿಖಿಲ್ಗೆ ಜೋಡಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.