
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಫೇಮಸ್ ಧಾರಾವಾಹಿ ‘ರಾಧಾ ರಮಣ’ದಲ್ಲಿ ಕಿರುತೆರೆ ರಾಧಿಕಾ ಪಂಡಿತ್ ಕಾವ್ಯಾ ಗೌಡ ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.
‘ಪ್ಯಾಟೆ ಮಂದಿ ಕಾಡಿಗೆ ಬಂದ್ರು ’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಕಾವ್ಯ ಇದಾದ ಮೇಲೆ ಕಾಣಿಸಿಕೊಂಡಿದ್ದು ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಗಳಲ್ಲಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದಾದ ಮೇಲೆ ಹೆಚ್ಚಾಗಿ ಜಾಹಿರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಹಾಗೂ ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದರು.
ಕಿರುತೆರೆ ರಾಧಿಕಾ ಪಂಡಿತ್ ಇವರು...!
ಈ ಹಿಂದೆ ರಾಧಾ ಮಿಸ್ ಪಾತ್ರವನ್ನು ಕಿರುತೆರೆಯ ದಿ ಮೋಸ್ಟ್ ಡಿಸೈರಬಲ್ ವುಮೆನ್ ಶ್ವೇತಾ ಪ್ರಸಾದ್ ನಿರ್ವಹಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ಅಭಿನಯಿಸುವುದಾಗಿ 1 ವರ್ಷದ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಒಪ್ಪಂದ ಮುಗಿದು 2 ವರ್ಷಗಳಾಗಿವೆ. ಕಿರುತೆರೆಯಿಂದ ಬ್ರೇಕ್ ಬೇಕೆಂದು ಹೊರ ಬಂದಿದ್ದಾರೆ.
ಸೌಮ್ಯ ಸ್ವಭಾವ, ಮುಗ್ಧ, ಸ್ವಾಭಿಮಾನಿ ಗೃಹಿಣಿಯ ಪಾತ್ರದಲ್ಲಿ ಕಾವ್ಯ ತಮ್ಮ ಅಭಿನಯದ ಮೂಲಕ ಜನರಿಗೆ ಹತ್ತಿರವಾಗಲಿ ಎಂದು ಆಶಿಸೋಣ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.