
ಬೆಂಗಳೂರು(ಅ.5): ಕಿಚ್ಚ ಸುದೀಪ್ ವಿರುದ್ಧ ಕರ್ನಾಟಕ ವಾಣಿಜ್ಯ ಮಂಡಳಿ ತಿರುಗಿ ಬಿದ್ದಿದೆ. ಸುದೀಪ್ ನಡೆಸಿಕೊಡುವ ರಿಯಾಲಿಟಿ ಶೋ ಬಿಗ್ಬಾಸ್'ನಿಂದಾಗಿ ಚಲನಚಿತ್ರಗಳಿಗೆ ದೊಡ್ಡ ಪೆಟ್ಟು ಬೀಳಲಿದೆ. ‘ಸುದೀಪ್ ಅವರೇ ದಯವಿಟ್ಟು ಚಿತ್ರೋದ್ಯಮ ಉಳಿಸಿಕೊಳ್ಳಿ’ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು ಕನ್ನಡ ನಿರ್ಮಾಪಕರ ಸಂಘದ ಪರವಾಗಿ ಒಕ್ಕೊರಲ ಮನವಿ ಮಾಡಿದ್ದಾರೆ.
ಬಿಗ್ಬಾಸ್ ಪ್ರಸಾರ ತಡೆ ಕೋರಿ ಪ್ರತಿಭಟನೆ ನಡೆಸಲು ನಿರ್ಮಾಪಕರ ಸಂಘ ನಿರ್ಧರಿಸಿದ್ದು, ಅ. 8ರಂದು ಬಿಡದಿಯ ಬಿಗ್ಬಾಸ್ ಹೌಸ್ ಬಳಿ ಪ್ರತಿಭಟನೆ ನಡೆಸಲಿದ್ದಾರಂತೆ. 'ನಟರು ಟಿವಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರರಂಗಕ್ಕೆ ಪೆಟ್ಟು
ನಟ, ನಿರೂಪಕರ ಮನೆ ಬಾಗಿಲಿಗೆ ಹೋಗಿ ಮನವಿ ಮಾಡುತ್ತೇವೆ. ಹಿರಿಯ ನಟ ಅಂಬರೀಷ್ ಅವರು ಮಧ್ಯ ಪ್ರವೇಶಿಸಿ ಕನ್ನಡ ಚಿತ್ರರಂಗವನ್ನು ಉಳಿಸಬೇಕು ಎಂದು ಮನವಿ ಮಾಡಿದ್ದಾರೆ. ಹಾಗಾದರೆ ಬಿಗ್ ಬಾಸ್ ನಿಷೇಧವಾಗುತ್ತ ? ಕಾದು ನೋಡಬೇಕು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.