ಪುಣ್ಯಾತ್‌ಗಿತ್ತೀರಿಗೆ ಟಕ್ಕರ್ ಕೊಟ್ಟ ಕಿರುತೆರೆ ‘ಕುರಿಬಾಂಡ್’!

By Web DeskFirst Published Aug 29, 2019, 8:59 AM IST
Highlights

ಕಿರುತೆರೆಯ ‘ಕುರಿಬಾಂಡ್’ ಕಾರ್ಯಕ್ರಮದ ಮೂಲಕ ಬೆಳ್ಳಿತೆರೆಗೆ ಬಂದ ಹಾಸ್ಯನಟರ ಪೈಕಿ ರಂಗ ಒಬ್ಬರು.

‘ಕಿರಾತಕ’ ಚಿತ್ರದ ಮೂಲಕ ಹಾಸ್ಯ ನಟರಾಗಿ ಬೆಳ್ಳಿತೆರೆಗೆ ಪರಿಚಯವಾದ ಅವರು ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಇದೇ ವಾರ ತೆರೆಗೆ ಬರುತ್ತಿರುವ ‘ಪುಣ್ಯಾತ್ಗಿತ್ತೀರು’ ಸಿನಿಮಾದಲ್ಲಿ 9 ಗೆಟಪ್‌ಗಳಲ್ಲಿ
ಕಾಣಿಸಿಕೊಂಡಿದ್ದಾರಂತೆ.

ಅಂಧನಾದ ಲೂಸ್ ಮಾದ ಸಹೋದರ!

ಹಾಗೆಯೇ ಚಿತ್ರದಲ್ಲಿನ ನಾಲ್ವರು ಪುಣ್ಯಾತ್‌ಗಿತ್ತೀಯರಿಗೆ ಚಿತ್ರದ ಉದ್ದಕ್ಕೂ ಟಕ್ಕರ್ ಕೊಡುವುದೇ ಅವರ ಕೆಲಸವಂತೆ. ಆ ಕಾರಣಕ್ಕೆ ಇದೊಂದು ವಿಶಿಷ್ಟವಾದ ಪಾತ್ರ ಮತ್ತು ವಿಶೇಷವಾದ ಸಿನಿಮಾ ಎನ್ನುವುದು ಹಾಸ್ಯ ನಟ ರಂಗ ಅಭಿಪ್ರಾಯ.

‘ಪೊಲಿಟಿಕಲ್ ಥ್ರಿಲ್ಲರ್’ಗೆ ಕಾಲಿಟ್ಟ ಸ್ಯಾಂಡಲ್‌ವುಡ್ ನಟಿ!

‘ಸಿನಿಮಾ ಜಗತ್ತಿಗೆ ನಾನು ಬಂದಿದ್ದು ಹಾಸ್ಯ ನಟನಾಗಿಯೇ. ಸಣ್ಣ ಪುಟ್ಟ ಪಾತ್ರಗಳಲ್ಲೂ ಹಾಸ್ಯ ಮಾಡುತ್ತಾ, ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದ್ದೇನೆ. ಅಪಾರ ಮೆಚ್ಚುಗೆಯೂ ಸಿಕ್ಕಿದೆ. ಆದರೆ ಈಗ ಇನ್ನೊಂದು ಬಗೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ’ ಎನ್ನುತ್ತಾರೆ ಕುರಿ ರಂಗ. ರಾಜು ನಿರ್ದೇಶನದ ಚಿತ್ರವಿದು. ಮಹಿಳಾ ಪ್ರಧಾನ ಚಿತ್ರ. ಸತ್ಯನಾರಾಯಣ ಚಿತ್ರದ ನಿರ್ಮಾಪಕ. ಮಮತಾ ರಾಹುತ್, ದಿವ್ಯಶ್ರೀ, ಐಶ್ವರ್ಯ ಹಾಗೂ ಸಂಭ್ರಮ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

 

click me!