
ಕಳೆದ ಎರಡೂವರೆ ವರ್ಷಗಳಿಂದ ಲಕ್ಷಾಂತರ ವೀಕ್ಷಕರನ್ನು ರಂಜಿಸಿದ್ದ ಸೀತಾರಾಮ ಸೀರಿಯಲ್ ಮುಗಿದಿದೆ. ಕೊನೆಯ ದಿನದ ಶೂಟಿಂಗ್ನಲ್ಲಿ ನಡೆದ ಘಟನೆಗಳನ್ನು ಹಲವು ಕಲಾವಿದರ ಇದಾಗಲೇ ಶೇರ್ ಮಾಡಿಕೊಂಡಿದ್ದಾರೆ. ಆದರೆ ಇದೀಗ ಪ್ರಿಯಾ ಪಾತ್ರಧಾರಿ ಮೇಘನಾ ಶಂಕರಪ್ಪ ಅವರು, ಕೊನೆಯ ದಿನ ಪಾನೀಪುರಿ ಪಾರ್ಟಿ ಮಾಡಿರುವ ವಿಡಿಯೋ ಶೇರ್ ಮಾಡಿದ್ದಾರೆ. ಹೇಗೆ ಕೊನೆಯ ದಿನ ಎಂಜಾಯ್ ಮಾಡಿದ್ವಿ ಎನ್ನುವುದರ ಬಗ್ಗೆ ಅವರು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ತಿಳಿಸಿದ್ದಾರೆ. ಆದರೆ ಆ ಪಾನೀಪುರಿಯ ಪಾರ್ಟಿಯಲ್ಲಿ ಇದ್ದ ಖುಷಿ ಕೊನೆಯ ಕ್ಷಣದಲ್ಲಿ ನಡೆದ ಕೇಕ್ ಪಾರ್ಟಿಯನ್ನು ಹೇಗೆ ಕಣ್ಣೀರಿನ ಅಲೆಯಲ್ಲಿ ತೇಲಿಸಿತು ಎನ್ನುವುದನ್ನು ಇದರಲ್ಲಿ ನೋಡಬಹುದು. ರಾಮ್, ಸಿಹಿ ಪಾತ್ರಧಾರಿ ಸೇರಿದಂತೆ ಉಳಿದ ಕಲಾವಿದರು ಹೇಗೆ ಭಾವುಕರಾಗಿದ್ದರು ಎನ್ನುವುದನ್ನು ನೋಡಬಹುದು. ಸಿಹಿ ಅಳುತ್ತಲೇ ಕೇಕ್ ಮಾಡುತ್ತಿರುವುದನ್ನು ನೋಡಿದರೆ ಆಕೆಯಷ್ಟು ನೊಂದುಕೊಂಡಿದ್ದಳು ಎನ್ನುವುದನ್ನೂ ನೋಡಬಹುದಾಗಿದೆ.
ಅಷ್ಟಕ್ಕೂ ಒಂದು ಧಾರಾವಾಹಿ ಎಂದರೆ ಅದರಲ್ಲಿ ನಟಿಸುವ ಕಲಾವಿದರಿಗೆ ಅದೊಂದು ರೀತಿಯಲ್ಲಿ ಮನೆಯೇ ಆಗಿಬಿಟ್ಟಿರುತ್ತದೆ. ಅಲ್ಲಿ ಇರುವವರೆಲ್ಲರೂ ಕುಟುಂಬದವರೇ ಆಗಿಬಿಡುತ್ತಾರೆ. 3-4 ವರ್ಷಗಳ ವರೆಗೆ ದಿನಂಪ್ರತಿ ಮನೆಗಿಂತಲೂ ಹೆಚ್ಚಾಗಿ, ಮನೆಯ ಸದಸ್ಯರಿಗಿಂತಲೂ ಹೆಚ್ಚಾಗಿ ಆ ಸೀರಿಯಲ್ ನಟ-ನಟಿಯರ ಜೊತೆ ಹೆಚ್ಚು ಕಾಲ ಕಳೆಯುವ ಕಾರಣದಿಂದ ಅದೊಂದು ರೀತಿಯ ಸುಮಧುರ ಬಾಂಧವ್ಯ ಮೂಡಿಬಿಟ್ಟಿರುತ್ತದೆ. ಹಲವಾರು ಕಲಾವಿದರು ಸೀರಿಯಲ್ಗಳಲ್ಲಿ ತುಂಬಾ ಎಂಜಾಯ್ ಮಾಡುತ್ತಾ, ಅಲ್ಲಿರುವ ನಟ-ನಟಿಯರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಿರುತ್ತಾರೆ. ಆದ್ದರಿಂದ ಅವರಿಗೆ ಮನೆಯವರಂತೆಯೇ ಸಹ ನಟರೂ ತುಂಬಾ ಕ್ಲೋಸ್ ಆಗಿರುತ್ತಾರೆ. ಇಂಥ ಸಂದರ್ಭಗಳಲ್ಲಿ ಆ ಸೀರಿಯಲ್ ಮುಗಿಯುತ್ತೆ ಎಂದಾಗ ಹೇಳಿಕೊಳ್ಳಲಾಗದ ನೋವು, ಸಂಕಟ ಉಂಟಾಗುವುದು ಸಹಜ. ತಮ್ಮದೇ ಮನೆಯವರಿಂದ ದೂರ ಆಗ್ತಿದ್ದವೋ ಎನ್ನುವ ಭಾವನೆ ಬರುತ್ತದೆ.
ಕೆಲವು ಕಲಾವಿದರು ಈ ಸಂಕಟವನ್ನು ತಡೆದುಕೊಳ್ಳುತ್ತಾರೆ. ಮತ್ತೆ ಕೆಲವರಿಗೆ ಇನ್ನೊಂದು ಸೀರಿಯಲ್ನಲ್ಲಿ ನಟಿಸುವ ಅವಕಾಶ ಇರುವುದಿಂದ ಅದರಲ್ಲಿ ಬಿಜಿಯಾಗಿ, ಹಿಂದಿನ ಸೀರಿಯಲ್ ಮರೆತೇ ಬಿಡುತ್ತಾರೆ. ಮತ್ತೆ ಕೆಲವರು ತಾವೊಬ್ಬರು ಕಲಾವಿದರು ಅಷ್ಟೇ ಎನ್ನುವುದನ್ನು ಅರ್ಥ ಮಾಡಿಕೊಂಡಿರುತ್ತಾರೆ. ಮತ್ತೆ ಕೆಲವರಿಗೆ ಇದುಕಲಾವಿದನ ಲೈಫ್ ಅಷ್ಟೇ ಎನ್ನುವುದು ತಿಳಿದಿರುತ್ತದೆ. ಆದರೆ ಕೆಲವರು ಹಾಗಲ್ಲ. ತುಂಬಾ ಭಾವನಾಜೀವಿಗಳಾಗಿ ಬಿಟ್ಟಿರುತ್ತಾರೆ. ಅದರಲ್ಲಿಯೂ ರಿಯಲ್ ಲೈಫ್ನಲ್ಲಿ ಏನೇನೋ ನೋವು ಅನುಭವಿಸಿದ ಕಲಾವಿದರ ವಿಷಯಕ್ಕೆ ಬಂದರೆ, ಸೀರಿಯಲ್ ನಟರನ್ನೇ ತಮ್ಮ ಬಂಧುಗಳು ಎಂದುಕೊಂಡಿರುವ ಅವರಿಗೆ ಈ ವಿದಾಯ ಅಕ್ಷರಶಃ ನಲುಗಿಸಿಬಿಡುತ್ತದೆ.
ಸೀತಾರಾಮ ಸೀರಿಯಲ್ನಲ್ಲಿ ತುಂಬಾ ನೋವು, ಸಂಕಟ ಅನುಭವಿಸುತ್ತಲೇ ಆ ದುಃಖವನ್ನು ನಿಯಂತ್ರಿಸಿಕೊಳ್ಳಲು ಆಗದವರು ಎಂದರೆ ರಾಮ್ ಪಾತ್ರಧಾರಿ ಗಗನ್ ಚಿನ್ನಪ್ಪ ಮತ್ತು ಸೀರಿಯಲ್ನ ಸೆಂಟರ್ ಆಫ್ ಅಟ್ರಾಕ್ಷನ್ ಸಿಹಿ-ಸುಬ್ಬಿ ರೀತು ಸಿಂಗ್. ಸೀತಾ ಪಾತ್ರಧಾರಿ ವೈಷ್ಣವಿಗೆ ಮದುವೆ ಫಿಕ್ಸ್ ಆಗಿದ್ದು, ಅದರ ಬಿಜಿಯಲ್ಲಿದ್ದಾರೆ. ಪ್ರಿಯಾ ಪಾತ್ರಧಾರಿ ಮೇಘನಾ ಶಂಕರಪ್ಪ ಅವರದ್ದೂ ಜಸ್ಟ್ ಮ್ಯಾರೇಜ್ ಆಗಿದೆ. ಅಶೋಕ್ ಪಾತ್ರಧಾರಿ ಅಶೋಕ್ ಶರ್ಮಾ ಇದಾಗಲೇ ಸಂದರ್ಶನವೊಂದರಲ್ಲಿ ತಮಗೂ ಸಂಕಟ ಆಗಿದ್ದರೂ ಅದನ್ನು ಮ್ಯಾಜೇಜ್ ಮಾಡಿದೆ ಎಂದಿದ್ದಾರೆ. ಉಳಿದ ಕಲಾವಿದರು ಹಿರಿಯ ಕಲಾವಿದರಾಗಿದ್ದು, ಅವರಿಗೆ ಇದಾಗಲೇ ಸಾಕಷ್ಟು ಅನುಭವವಾಗಿದೆ. ಈ ಸೀರಿಯಲ್ ದೊಡ್ಡ ಬ್ರೇಕ್ ಕೊಟ್ಟಿರೋದು ರಾಮ್ ಆಗಿರೋ ಗಗನ್ ಮತ್ತು ಸಿಹಿ ಆಗಿರೋ ರೀತು ಸಿಂಗ್ಗೆ. ಅದರಲ್ಲಿಯೂ ರೀತು ದೊಡ್ಡ ಮಟ್ಟದ ಸ್ಟಾರ್ ಆಗಿ ಬೆಳೆದುಬಿಟ್ಟಿದ್ದಾಳೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.