‘ಮಗಳು ಜಾನಕಿ’ ಮಂಗಳತ್ತೆ ಅಪಘಾತದಲ್ಲಿ ದುರ್ಮರಣ

Published : Jul 18, 2019, 09:38 AM ISTUpdated : Jul 18, 2019, 09:41 AM IST
‘ಮಗಳು ಜಾನಕಿ’ ಮಂಗಳತ್ತೆ ಅಪಘಾತದಲ್ಲಿ ದುರ್ಮರಣ

ಸಾರಾಂಶ

ಚಿತ್ರದುರ್ಗದ ಬಳಿ ಭೀಕರ ಅಪಘಾತ; ಐವರ ಸಾವು | ‘ಮಗಳು ಜಾನಕಿ’ ಧಾರಾವಾಹಿ ಮಂಗಳತ್ತೆ ಖ್ಯಾತಿಯ ಶೋಭಾ ದುರ್ಮರಣ 

ಚಿತ್ರದುರ್ಗ (ಜು. 18): ಲಾರಿ ಹಾಗೂ ಇನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಐವರು ಮೃತಟ್ಟಿರುವ ಘಟನೆ ಚಿತ್ರದುರ್ಗ ಹೊರವಲಯ ಕುಂಚಿಗನಹಾಳು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಧವಾರ ನಡೆದಿದೆ.  ಈ ಅಪಘಾತದಲ್ಲಿ ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಮಂಗಳತ್ತೆ (ಶೋಭಾ) ಮೃತಪಟ್ಟಿದ್ದಾರೆ. 

ಬೆಂಗಳೂರಿನ ಕೆ.ಆರ್‌ ಪುರಂ ನಿವಾಸಿಗಳಾಗಿದ್ದ ಮಂಜುಳಾ, ಶೋಭಾ (ಮಗಳು ಜಾನಕಿ ಮಂಗಳತ್ತೆ), ಸುಕನ್ಯಾ, ಶ್ಯಾಮಲಮ್ಮ ಹಾಗೂ ಚಾಲಕ ಅಶೋಕ್‌ ಮೃತರಾಗಿದ್ದಾರೆ. ಪರ್ವಿತಾ, 4 ವರ್ಷದ ಹೆಣ್ಣು ಮಗು ಶ್ರೇಷ್ಠ ಮತ್ತು ಒಂದೂವರೆ ವರ್ಷದ ಮಗುವಿಗೆ ಗಾಯವಾಗಿದ್ದು, ಇವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. 

ಬೆಂಗಳೂರಿನಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಇನೋವಾ ಕಾರು ಚಿತ್ರದುರ್ಗದ ಬಳಿ ಬಂದಾಗ ಟೈರ್‌ ಸಿಡಿದು ಲಾರಿಗೆ ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಹಾಗೂ ಎಸ್ಪಿ ಡಾ.ಅರುಣ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳತ್ತೆ ಸಾವಿಗೆ ನಿರ್ದೇಶಕ ಟಿಎನ್ ಸೀತಾರಾಮ್ ಸೇರಿದಂತೆ ಇಡೀ ತಂಡ ಸಂತಾಪ ಸೂಚಿಸಿದೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?
Karna: ಎಲ್ಲವೂ ಸರಿ ಹೋಗತ್ತೆ ಅಂದುಕೊಂಡಾಗ್ಲೇ ನಿಧಿಯ ಈ ನಿರ್ಧಾರ ಸರಿನಾ? ನಿತ್ಯಾ ಮುಂದೆ ಆಗಿದ್ದೇನು?