ದರ್ಶನ್ ಮನೆ ಮೇಲೆ ಕಲ್ಲು ತೂರಾಟ; ನಿಖಿಲ್ ಹೇಳೋದೇನು?

Published : Mar 24, 2019, 09:48 AM IST
ದರ್ಶನ್ ಮನೆ ಮೇಲೆ ಕಲ್ಲು ತೂರಾಟ; ನಿಖಿಲ್ ಹೇಳೋದೇನು?

ಸಾರಾಂಶ

ಮಂಡ್ಯ ಚುನಾವಣೆಯಲ್ಲಿ ಸುಮಲತಾ ಪರವಾಗಿ ನಿಂತ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಆಗಿದ್ದು, ಇದೆಲ್ಲಾ ಏನು ಯಾಕೆ ಎಂದು ನಿಖಿಲ್ ನನ್ನು ಪ್ರಶ್ನಿಸಿದಾಗ ಸಿಕ್ಕ ಉತ್ತರ ಇದು

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸುತ್ತಿದ್ದು ಚಿತ್ರೋದ್ಯಮದ ಅನೇಕ ಗಣ್ಯರು ಅವರ ಪರವಾಗಿ ನಿಂತಿದ್ದಾರೆ. ದರ್ಶನ್ ಹಾಗೂ ಯಶ್ ಸುಮಲತಾಗೆ ಸಾಥ್ ನೀಡಿರುವುದು ಗಮನ ಸೆಳೆದಿದೆ.

ಪ್ರಚಾರದಲ್ಲಿ ಬ್ಯುಸಿ ಆಗಿರುವ ದರ್ಶನ್ ರವರ ರಾಜರಾಜೇಶ್ವರಿ ನಗರದಲ್ಲಿರುವ ಐಡಿಯಲ್ ಹೋಮ್ಸ್ ಲೇಔಟ್ ನಿವಾಸ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಇದರ ಹಿಂದಿನ ಕೈವಾಡ ಯಾರದು ಎಂದು ತಿಳಿದು ಬಂದಿಲ್ಲ. ಆದರೆ ಇದಕ್ಕೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ನಿಂತಿರುವ ಸುಮತಲಾ ಪರ ಪ್ರಚಾರ ಕಾರಣ ಎಂದು ಕೇಳಿ ಬರುತ್ತಿದೆ.

ಇನ್ನು ಪ್ರಚಾರದಲ್ಲಿ ಬ್ಯುಸಿ ಆಗಿರುವ ನಿಖಿಲ್ ನನ್ನು ನಡೆದಿರುವ ಘಟನೆ ಬಗ್ಗೆ ಕೇಳಿದರೆ ‘ಇಂತಹ ಕೆಲಸ ನಾವ್ಯಾಕೆ ಮಾಡೋಣ, ನಮ್ಮ ಮೇಲೂ ಆ ರೀತಿ ಪ್ರಯತ್ನ ಆಗಿದೆ. ನಮಗೆ ಎಲ್ಲಾ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಇದನ್ನು ಯಾರೇ ಮಾಡಿದರೂ ಹೀಗೆಲ್ಲಾ ಮಾಡಬಾರದು’ ಎಂದು ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

The Devil Movie Review: ದರ್ಶನ್‌ ತೂಗುದೀಪ 'ಡೆವಿಲ್‌' ಹೇಗಿದೆ? ಡೆವಿಲ್‌ನಲ್ಲೂ ಗಿಲ್ಲಿ ನಟನ ಭರ್ಜರಿ ಕಾಮಿಡಿ
ಗಳಗಳನೆ ಅತ್ತ ಕಾವ್ಯಾ; ಟಾಸ್ಕ್‌ ಗೆದ್ದ ಗಿಲ್ಲಿ, ಸ್ನೇಹದಲ್ಲಿ ಸೋತ!