ಮಾಸ್ತಿಗುಡಿ ಕ್ಲೈಮ್ಯಾಕ್ಸ್​ ವೇಳೆ ಅವಘಡ: ಶೂಟಿಂಗ್ ವೇಳೆ ದುನಿಯ ವಿಜಿ ಜೊತೆ ಹೆಲಿಕಾಪ್ಟರ್​ನಿಂದ ಹಾರಿದ ಕಲಾವಿದರು ನಾಪತ್ತೆ...!

Published : Nov 07, 2016, 09:49 AM ISTUpdated : Apr 11, 2018, 12:49 PM IST
ಮಾಸ್ತಿಗುಡಿ ಕ್ಲೈಮ್ಯಾಕ್ಸ್​  ವೇಳೆ ಅವಘಡ: ಶೂಟಿಂಗ್ ವೇಳೆ ದುನಿಯ ವಿಜಿ ಜೊತೆ ಹೆಲಿಕಾಪ್ಟರ್​ನಿಂದ ಹಾರಿದ ಕಲಾವಿದರು ನಾಪತ್ತೆ...!

ಸಾರಾಂಶ

100 ಅಡಿ ಎತ್ತರದಿಂದ ಹೆಲಿಕಾಪ್ಟರ್​ನಿಂದ ಹಾರಿದ ಕಲಾವಿದರು ನೀರಿನಿಂದ ಮೇಲಕ್ಕೆ ಬಂದಿಲ್ಲ  ಎನ್ನಲಾಗಿದ್ದು, ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಶೂಟಿಂಗ್ ವೇಳೆ ಈ ಅನಾಹುತ ನಡೆದಿದೆ ಎನ್ನಲಾಗಿದೆ. 

ಬೆಂಗಳೂರು(ನ.07): ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್​  ವೇಳೆ ಅವಘಡವೊಂದು ಸಂಭವಿಸಿದ್ದು, ಶೂಟಿಂಗ್ ವೇಳೆ ಕೆರೆಗೆ ಹಾರಿದ್ದ ಇಬ್ಬರು ಕಲಾವಿದರು ಕಣ್ಮರೆಯಾಗಿದ್ದಾರೆ. 

100 ಅಡಿ ಎತ್ತರದಿಂದ ಹೆಲಿಕಾಪ್ಟರ್​ನಿಂದ ಹಾರಿದ ಕಲಾವಿದರು ನೀರಿನಿಂದ ಮೇಲಕ್ಕೆ ಬಂದಿಲ್ಲ  ಎನ್ನಲಾಗಿದ್ದು, ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಶೂಟಿಂಗ್ ವೇಳೆ ಈ ಅನಾಹುತ ನಡೆದಿದೆ ಎನ್ನಲಾಗಿದೆ. 

ನಾಯಕ ನಟ ದುನಿಯಾ ವಿಜಯ್ ಜೊತೆ ಕೆರೆಗೆ ಹಾರಿದ್ದ ಉದಯ್​, ಅನಿಲ್ ನಾಪತ್ತೆಯಾಗಿರುವ ಸಹ ಕಲಾವಿದರಾಗಿದ್ದಾರೆ.  ಕೆರೆಗೆ ಬಿದ್ದ ನಟ ದುನಿಯಾ ವಿಜಿ  ಈಜಿ ದಡ ಸೇರಿದ್ದಾರೆ ಆದರೆ ಸಹ ನಟರು ನಾಪತ್ತೆಯಾಗಿದ್ದಾರೆ. 

ಇಬ್ಬರು ಕಲಾವಿದರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಮಾಸ್ತಿಗುಡಿ ಶೂಟಿಂಗ್ ಸ್ಥಳದಲ್ಲಿ ಆತಂಕ ಸ್ಥಿತಿ ನಿರ್ಮಾಣವಾಗಿದ್ದು, ನಿರ್ದೇಶಕ ರವಿ ಶ್ರೀವತ್ಸ ಮಾರ್ಗದರ್ಶನದಲ್ಲಿ ಶೂಟಿಂಗ್ ನಡೆಯುತ್ತಿತ್ತು ಎನ್ನಲಾಗಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಮಿತಾಭ್ 14 ಚಿತ್ರಗಳ ರೀಮೇಕ್ ಮಾಡಿ, 33 ವರ್ಷಗಳ ಬಳಿಕ ಅಮಿತಾಭ್ ಜೊತೆ ನಟಿಸಿದ ನಟ ರಜನಿಕಾಂತ್!
ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!