#METoo ಕಹಿ ಘಟನೆ ನನ್ನ ಜೀವನದಲ್ಲಿ ನಡೆದಿಲ್ಲ : ಜಯಮಾಲಾ

Published : Oct 25, 2018, 04:36 PM IST
#METoo ಕಹಿ ಘಟನೆ ನನ್ನ ಜೀವನದಲ್ಲಿ ನಡೆದಿಲ್ಲ : ಜಯಮಾಲಾ

ಸಾರಾಂಶ

ಮೀ ಟೂ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ.  ಹೆಣ್ಣು ಮುಕ್ತವಾಗಿ ಬಂದಾಗ ಬೆಂಬಲ ನೀಡಬೇಕು.  ಹೆಣ್ಣಿಗೆ ರಕ್ಷಣೆ ಕೊಡುವ ನೆಪದಲ್ಲಿ ಗಂಡಸನ್ನು ದೂಷಿಸುವುದು ತಪ್ಪು.  ಹೆಣ್ಣಿನ ಚಿತ್ರಹಿಂಸೆಗೆ ದೌರ್ಜನ್ಯಕ್ಕೆ ಮಿಟೂ ಬಲ ತಂದುಕೊಟ್ಟಿದೆ ಎಂದು ಸಚಿವೆ ಜಯಮಾಲಾ ಹೇಳಿದ್ದಾರೆ. 

ಉಡುಪಿ (ಅ. 25):  ಮಿ ಟೂ ಅಭಿಯಾನದ ಬಗ್ಗೆ ನಟಿ, ರಾಜಕಾರಣಿ ಜಯಮಾಲಾ ಪ್ರತಿಕ್ರಿಯೆ ನೀಡಿದ್ದಾರೆ. 

ಮೀ ಟೂ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ.  ಹೆಣ್ಣು ಮುಕ್ತವಾಗಿ ಬಂದಾಗ ಬೆಂಬಲ ನೀಡಬೇಕು.  ಹೆಣ್ಣಿಗೆ ರಕ್ಷಣೆ ಕೊಡುವ ನೆಪದಲ್ಲಿ ಗಂಡಸನ್ನು ದೂಷಿಸುವುದು ತಪ್ಪು.  ಹೆಣ್ಣಿನ ಚಿತ್ರಹಿಂಸೆಗೆ ದೌರ್ಜನ್ಯಕ್ಕೆ ಮಿಟೂ ಬಲ ತಂದುಕೊಟ್ಟಿದೆ ಎಂದು ಹೇಳಿದ್ದಾರೆ. 

"

ಡಾ. ರಾಜ್ ಕುಮಾರ್ ಕಾಲದಲ್ಲಿ ಬೆಳೆದವರು ನಾವು.  ನಮ್ಮ ಕಾಲದಲ್ಲಿ ಚಿತ್ರರಂಗ ಸುವರ್ಣ ಯುಗವಾಗಿತ್ತು.  ಇಂತಹ ದಿನಗಳನ್ನೇ ನಾನು ನೋಡಿಲ್ಲ.  46 ವರ್ಷದಲ್ಲಿ 75 ಸಿನೆಮಾ ಮಾಡಿದ್ದೇನೆ.  ಒಂದೇ ಒಂದು ಕಹಿ ಘಟನೆ ನನ್ನ ಜೀವನದಲ್ಲಿ ನಡೆದಿಲ್ಲ ಎಂದಿದ್ದಾರೆ. 

ಈಗಿನ ಚಿತ್ರರಂಗದ ಬಗ್ಗೆ ನನಗೆ ಗೊತ್ತಿಲ್ಲ.  ನಟ ಅರ್ಜುನ್ ಸರ್ಜಾ ಸರಳ ಸಜ್ಜನ ಹುಡುಗ.  ಸರ್ಜಾ ತಂದೆಯ ಜೊತೆಯೂ ಅಭಿನಯಿಸಿದ್ದೆ.  ವಾಣಿಜ್ಯ ಮಂಡಳಿ ಈ ಬಗ್ಗೆ ತೀರ್ಮಾನಕ್ಕೆ ಬರಲಿದೆ ಎಂದು ಸಚಿವೆ ಜಯಮಾಲಾ ಹೇಳಿಕೆ ನೀಡಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
Sonali Bendre: 'ಅಡುಗೆಮನೆಗೆ ಹೋಗ್ಬೇಡ ನೀನು'.. ಅಂತ ಖಡಕ್ ಆಗಿ ಹೇಳಿದ್ರು ನನ್ ಅತ್ತೆ!