
ಅಹಮದಾಬಾದ್: ದಲಿತ ಮುಖಂಡ, ಗುಜರಾತ್ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಶೀಘ್ರವೇ ತಮಿಳು ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇವಾನಿ ಅವರ ದಲಿತ ಹೋರಾಟದಿಂದ ಪ್ರಭಾವಿತರಾದ ತಮಿಳು ನಿರ್ದೇಶಕ ಪಾ.ರಂಜಿತ್, ಶಾಸಕರನ್ನು ಭೇಟಿ ಮಾಡಿ ಚಿತ್ರದಲ್ಲಿ ಅಭಿನಯಿಸಲು ಕೇಳಿಕೊಂಡಿದ್ದಾರೆ.
ದಲಿತ ಹಕ್ಕುಗಳು ಮತ್ತು ಈಗ ನಡೆಯುತ್ತಿರುವ ಚಳವಳಿಗಳು ಸೇರಿ ಹಲವು ವಿಷಯಗಳ ಬಗ್ಗೆ ಮೇವಾನಿ ಅವರ ಬಳಿ ಚರ್ಚಿಸಿದ್ದೇನೆ. ಅವರ ವ್ಯಕ್ತಿತ್ವಕ್ಕೆ ಸೂಕ್ತ ಪಾತ್ರ ನೀಡಲಾಗುವುದು ಎಂದು ರಂಜಿತ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಜನೀಕಾಂತ್ ಅಭಿನಯದ ಕಬಾಲಿ ಚಿತ್ರವನ್ನು ನಿರ್ಮಿಸಿದ್ದು ರಂಜಿತ್.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.