ಕಾವೇರಿ ನದಿ ನಿರ್ವಹಣೆ ಪ್ರಾಧಿಕಾರ ರಚನೆ ಬಗ್ಗೆ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ನೀಡಿರುವ ಹೇಳಿಕೆಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಜನೀ ನಟನೆಯ 'ಕಾಲ' ಬಿಡುಗಡೆಗೆ ರಾಜ್ಯ ವಿರೋಧಿಸುತ್ತಿದೆ. ಈ ಕ್ರಮವನ್ನು ಬಹು ಭಾಷಾ ನಟ ಪ್ರಕಾಶ್ ವಿರೋಧಿಸಿದ್ದು, 'ಕಾವೇರಿಗೂ, 'ಕಾಲ'ಗೂ ಏನು ಸಂಬಂಧ?' ಎಂದು ಪ್ರಶ್ನಿಸಿದ್ದಾರೆ.