‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಮೈಸೂರಿನ ಸಿಂಹ, ಯುವಜನತೆಯ ಸೂರ್ಯ!

Published : Sep 05, 2019, 01:37 PM ISTUpdated : Sep 05, 2019, 05:18 PM IST
‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಮೈಸೂರಿನ ಸಿಂಹ, ಯುವಜನತೆಯ ಸೂರ್ಯ!

ಸಾರಾಂಶ

ಕನ್ನಡದ ಕೋಟ್ಯಾಧಿಪತಿ ಹಾಟ್ ಸೀಟ್ ನಲ್ಲಿ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ | ಗೆದ್ದ ಹಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ | 

ಮೈಸೂರು ಸಂಸದ ಪ್ರತಾಪ್ ಸಿಂಹ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಜನಪರ ಕೆಲಸಗಳ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗಿದ್ದಾರೆ. ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಉತ್ಸುಕತೆ ತೋರುತ್ತಿದ್ದಾರೆ. ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಹ ಸಂತ್ರಸ್ತರ ನೆರವಿಗೆ ನಿಲ್ಲಲು ‘ಕನ್ನಡದ ಕೋಟ್ಯಧಿಪತಿ’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ಗೆದ್ದ ಹಣವನ್ನು ಮುಖ್ಯಮಂತ್ರಿಗಳ ಸಂತ್ರಸ್ತರ ನಿಧಿಗೆ ಕೊಡಲು ನಿರ್ಧರಿಸಿದ್ದಾರೆ. 

ಕೋಟ್ಯಧಿಪತಿಯಲ್ಲಿ 25 ಲಕ್ಷದ ಪ್ರಶ್ನೆ ಕ್ವಿಟ್ ಮಾಡಿ 12.5 ಲಕ್ಷ ಸಾಕು ಎಂದ ಮಹಿಳೆ!

 

ಕನ್ನಡದ ಕೋಟ್ಯಧಿಪತಿ ಹಾಟ್ ಸೀಟಿನಲ್ಲಿ ಮೈಸೂರಿನ ಸಿಂಹ, ಯುವಜನತೆಯ ಸೂರ್ಯ ಕುಳಿತಿದ್ದಾರೆ. ಇಬ್ಬರೂ ಕೂಡಾ ಒಳ್ಳೆಯ ಸ್ಪರ್ಧಿಗಳು. ಇವರಿಬ್ಬರೂ ಟಿವಿ ಚಾನೆಲ್ ಗಳಲ್ಲಿ, ಚರ್ಚೆಗಳಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುತ್ತಾರೆ. ಹಾಗಾಗಿ ಇವರಿಗೆ ಟಿವಿ ಮಾಧ್ಯಮ ಹೊಸದಲ್ಲ. ಆದರೆ ಇದೇ ಮೊದಲ ಬಾರಿಗೆ ಮನರಂಜನಾ ವಾಹಿನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ಕೋಟ್ಯಧಿಪತಿಯಲ್ಲಿ ಪುನೀತ್‌ಗೆ ಸವಾಲು ಹಾಕಿದ ಸ್ಪರ್ಧಿ!

ಈ ಎಪಿಸೋಡ್ ಇದೇ ಶನಿವಾರ, ಭಾನುವಾರ ಅಂದರೆ ಸೆಪ್ಟೆಂಬರ್ 7, 8 ರಂದು ಪ್ರಸಾರವಾಗಲಿದೆ. ಎಷ್ಟು ಹಣ ಗೆದ್ದಿರಬಹುದು ಎಂಬುದು ಕುತೂಹಲ ಮೂಡಿಸಿದೆ. 

ಸೆ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!