
ಬೆಂಗಳೂರು (ಡಿ. 25): ರಮೇಶ್ ರೆಡ್ಡಿ(ನಂಗಲಿ) ಅವರ ತೇಜಸ್ವಿನಿ ಎಂಟರ್ ಪ್ರೈಸಸ್ ಅರ್ಪಿಸುವ, ಜಗನ್ಮೋಹನ್ ರೆಡ್ಡಿ ಹಾಗೂ ಶಿವಕುಮಾರ್ ರೆಡ್ಡಿ ಅವರು ನಿರ್ಮಿಸಿರುವ `ನಾತಿಚರಾಮಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸಂಧ್ಯಾರಾಣಿ ಹಾಗೂ ಮಂಜುನಾಥ್ ಎಸ್(ಮಂಸೋರೆ) ಕಥೆ ಬರೆದಿರುವ ಈ ಚಿತ್ರಕ್ಕೆ ಮಂಸೋರೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರುಪ್ರಸಾದ್ ನರ್ನಾಡ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಬಿಂದುಮಾಲಿನಿ ಸಂಗೀತ ನೀಡಿದ್ದಾರೆ. ನಾಗೇಂದ್ರ ಕೆ ಉಜ್ಜನಿ ಸಂಕಲನ ಹಾಗೂ ಸಂತೋಷ್ ಪಾಂಚಾಲ್ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಸಂಧ್ಯಾರಾಣಿ ಹಾಗೂ ಅಭಯ್ ಸಿಂಹ ಸಂಭಾಷಣೆ ಬರೆದಿದ್ದಾರೆ. ಕಿರಣ್ ಕಾವೇರಪ್ಪ, ನಂದಿನಿ ನಂಜಪ್ಪ, ಮದನ್ ಬೆಳ್ಳಿಸಾಲು ಹಾಗೂ ಮಂಸೋರೆ ಚಿತ್ರದ ಗೀತೆಗಳನ್ನು ರಚಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.