ಕುರುಕ್ಷೇತ್ರ ಸಂಭಾವನೆಯನ್ನು ನೆರೆ ಸಂತ್ರಸ್ತರಿಗೆ ನೀಡಿದ ನಿಖಿಲ್ ಕುಮಾರಸ್ವಾಮಿ!

Published : Aug 12, 2019, 01:46 PM IST
ಕುರುಕ್ಷೇತ್ರ ಸಂಭಾವನೆಯನ್ನು ನೆರೆ ಸಂತ್ರಸ್ತರಿಗೆ ನೀಡಿದ ನಿಖಿಲ್ ಕುಮಾರಸ್ವಾಮಿ!

ಸಾರಾಂಶ

ಪ್ರವಾಹಪೀಡಿತ ಪ್ರದೇಶಗಳಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ | ಅಗತ್ಯ ಸಾಮಗ್ರಿಗಳನ್ನು ನಿರಾಶ್ರಿತರಿಗೆ ತಲುಪಿಸಿದ ನಿಖಿಲ್ ಮತ್ತವರ ತಂಡ | ಕುರುಕ್ಷೇತ್ರದ ಸಂಭಾವನೆಯನ್ನು ನಿರಾಶ್ರಿತರಿಗೆ ನೀಡಲು ನಿರ್ಧಾರ 

ಬೆಂಗಳೂರು (ಆ. 12): ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಪ್ರವಾಹದ ಅಬ್ಬರಕ್ಕೆ ಜನ ಮನೆ ಹೊಲ, ಗದ್ದೆಗಳನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.  ನಿರಾಶ್ರಿತರಿಗೆ ಸಾರ್ವಜನಿಕರು ನೆರವಿನ ಹಸ್ತ ಚಾಚಿದ್ದಾರೆ. ರಾಜ್ಯದ ಬೇರೆ ಬೇರೆ ಕಡೆಯಿಂದ ನೆರವಿಗೆ ಧಾವಿಸುತ್ತಿದ್ದಾರೆ. 

ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ದರ್ಶನ್ ‘ಕುರುಕ್ಷೇತ್ರ’

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಕಾರ್ಯಕರ್ತರ ಜೊತೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಬಂದು ನಿರಾಶ್ರಿತರಿಗೆ ತಲುಪಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. 

ಧಾರವಾಡ, ಬೆಳಗಾವಿ, ಯಾದಗಿರಿ ಎಲ್ಲಾ ಕಡೆ ಭೇಟಿ ನೀಡುತ್ತಿದ್ದಾರೆ. ಕುರುಕ್ಷೇತ್ರದಲ್ಲಿ ಬಂದ ಸಂಭಾವನೆಯನ್ನು ಉತ್ತರ ಕರ್ನಾಟಕ ಭಾಗದ ಜನರಿಗೆ ಕೊಡುವುದಾಗಿ ಹೇಳಿದ್ದಾರೆ.

ಕುರುಕ್ಷೇತ್ರ, ಕೆಂಪೇಗೌಡ-2 ಗೂ ಬಿತ್ತು ನೆರೆ ಬರೆ; ಬಾಕ್ಸಾಫೀಸ್ ಕಲೆಕ್ಷನ್ ಠುಸ್!

ಎಡಗೈಯಲ್ಲಿ ಕೊಟ್ಟ ದಾನ ಬಲಗೈಗೆ ಗೊತ್ತಾಗಬಾರದು ಎಂದು ಕುರುಕ್ಷೇತ್ರದ ಸಂಭಾವನೆ ಎಷ್ಟು ಎಂದು ಎಲ್ಲಿಯೂ ಬಹಿರಂಗಪಡಿಸಿಲ್ಲ. ಎಷ್ಟು ಹಣವನ್ನು ಕೊಡುತ್ತಿದ್ದಾರೆಂದು ಹೇಳಿಲ್ಲ. 

ನಿಖಿಲ್ ಕೂಡಾ ದಾನ, ಸಹಾಯ ಮಾಡುವುದರಲ್ಲಿ ಅಪ್ಪನ, ಅಜ್ಜನ ದಾರಿಯಲ್ಲಿ ಸಾಗುತ್ತಿದ್ದಾರೆ. ಇದೂ ಕೂಡಾ ಒಂದು ಒಳ್ಳೆಯ ಬೆಳವಣಿಗೆ. ನಿಖಿಲ್ ಒಳ್ಳೆಯ ರಾಜಕಾರಣಿಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!
BBK 12: ಏನ್ರೀ ಇದು ತೆವಲು? ರಜತ್‌, ಅಶ್ವಿನಿ ಗೌಡ, ರಘು ಯಾಕೆ ಹೀಗೆಲ್ಲ ಮಾಡಿದ್ರು?