ರಾಜಕೀಯ ಮರೆತು ಅಭಿಷೇಕ್, ಸುಮಲತಾಗೆ ನಿಖಿಲ್ ವಿಶ್

Published : May 30, 2019, 12:27 PM IST
ರಾಜಕೀಯ ಮರೆತು ಅಭಿಷೇಕ್, ಸುಮಲತಾಗೆ ನಿಖಿಲ್ ವಿಶ್

ಸಾರಾಂಶ

ಮುನಿಸು ಮರೆತು ಒಂದಾದ ಕುಚಿಕೋ ಗೆಳೆಯರು | ಅಭಿಷೇಕ್ ಅಮರ್ ಗೆಲುವಿಗೆ ನಿಖಿಲ್ ಕುಮಾರಸ್ವಾಮಿ ವಿಶ್ | ಸುಮಲತಾ ಗೆಲುವಿಗೂ ವಿಶ್ 

ರಾಜಕೀಯದಲ್ಲಿ ಕಿತ್ತಾಟ, ಕೆಸರೆರಚಾಟಗಳೆಲ್ಲಾ ಕಾಮನ್. ರಾಜಕೀಯ ಅಖಾಡದಲ್ಲಿ ಸ್ನೇಹಿತರು ಶತ್ರುಗಳಾಗ್ತಾರೆ. ಮಂಡ್ಯ ಚುನಾವಣಾ ಅಖಾಡವೂ ಇದಕ್ಕೆ ಹೊರತಾಗಿರಲಿಲ್ಲ. ಅಭಿಷೇಕ್ ಅಂಬರೀಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಒಳ್ಳೆಯ ಸ್ನೇಹಿತರು. ಆದರೆ ಮಂಡ್ಯ ಚುನಾವಣೆಯಲ್ಲಿ ಇಬ್ಬರೂ ಪ್ರತಿಸ್ಪರ್ಧಿಗಳಾದರು. 

ಅಭಿಷೇಕ್ ಅಂಬರೀಶ್ ಅಮರ್ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಈ ಚಿತ್ರದ ಯಶಸ್ಸಿಗೆ ನಿಖಿಲ್ ಕುಮಾರಸ್ವಾಮಿ ವಿಶ್ ಮಾಡಿದ್ದಾರೆ. ರಾಜಕೀಯಕ್ಕಿಂತ ನನಗೆ ಸಂಬಂಧ ಬಹಳ ಮುಖ್ಯ. ನಾನದಕ್ಕೆ ಗೌರವ ಕೊಡುತ್ತೇನೆ. ಸುಮಕ್ಕ ಗೆಲುವಿಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 

ಮಂಡ್ಯ ಅಭಿವೃದ್ಧಿಗೆ ನಾನು ಕೈ ಜೋಡಿಸುತ್ತೇನೆ. ನನ್ನ ಸೋಲಿಗೆ ಯಾರೂ ಕಾರಣಕರ್ತರಲ್ಲ. ನನ್ನ ಸೋಲಿಗೆ ನಾನೇ ಕಾರಣ ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ. 

 

ನಾನು ಚುನಾವಣೆಯಲ್ಲಿ ಸೋತಿರಬಹುದು. ಆದರೆ ಈ ಚುನಾವಣೆಯಿಮದ ಸಾಕಷ್ಟು ಕಲಿತಿದ್ದೇನೆ. ನೀವು ನನ್ನನ್ನು ಗಂಭೀರ ರಾಜಕಾರಣಿ ಎಂದು ಪರಿಗಣಿಸುತ್ತೀರೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ನಮ್ಮ ಪಕ್ಷದ ಅಭಿವೃದ್ಧಿಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ನಮ್ಮ ಪಕ್ಷವನ್ನು ಅಭಿವೃದ್ಧಿಪಡಿಸಲು ಯತ್ನಿಸುತ್ತೇನೆ ಎಂದಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!