ಮದುವೆ ನಂತರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೇಳ್ತಿದ್ದಾರೆ ಪ್ರಿಯಾಮಣಿ!

By Suvarna Web DeskFirst Published Nov 7, 2017, 8:26 PM IST
Highlights

ನಟಿ ಪ್ರಿಯಾಮಣಿ-ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಸರಿಯಾಗಿ ಮೂರು ತಿಂಗಳು ಕಳೆದಿದೆ. ಮೂರೇ ತಿಂಗಳಿಗೆ ಪ್ರಿಯಾಮಣಿ  ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿದ್ದಾರೆ.ಮೂರೇ ತಿಂಗಳಿಗೆ ಸಿಹಿ ಸುದ್ದಿನಾ! ಅಂತ ಆಶ್ವರ್ಯ ಪಡಬೇಡಿ.

ಬೆಂಗಳೂರು (ನ.07): ನಟಿ ಪ್ರಿಯಾಮಣಿ-ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಸರಿಯಾಗಿ ಮೂರು ತಿಂಗಳು ಕಳೆದಿದೆ. ಮೂರೇ ತಿಂಗಳಿಗೆ ಪ್ರಿಯಾಮಣಿ  ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿದ್ದಾರೆ.ಮೂರೇ ತಿಂಗಳಿಗೆ ಸಿಹಿ ಸುದ್ದಿನಾ! ಅಂತ ಆಶ್ವರ್ಯ ಪಡಬೇಡಿ.

ಪ್ರಿಯಾಮಣಿ ಸ್ಯಾಂಡಲ್'ವುಡ್ ನಲ್ಲಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.'ನನ್ನ ಪ್ರಕಾರ' ಎನ್ನುವ ಚಿತ್ರದಲ್ಲಿ ಪ್ರಿಯಾಮಣಿ ನಟಿಸುತ್ತಿದ್ದಾರೆ.  ಇತ್ತಿಚಿಗೆ ಚಿತ್ರದ ಪೂಜೆ ನೇರವೇರಿದೆ.  'ದನಕಾಯೋನು' ಸಿನಿಮಾದ ನಂತರ ಯಾವುದೇ ಚಿತ್ರ ಒಪ್ಪಿಕೊಳ್ಳದ ಪ್ರಿಯಾಮಣಿ ಈಗ ಹೊಸಬರ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದೇ ವಾರದಿಂದ  ಚಿತ್ರೀಕರಣ ಶುರುವಾಗಲಿದ್ದು,  ವಿನಯ್ ಅನ್ನೋ ನವ ನಿರ್ದೇಶಕ ಸಿನಿಮಾವನ್ನ  ನಿರ್ದೇಶನ ಮಾಡುತ್ತಿದ್ದಾರೆ.  ಚಿತ್ರದಲ್ಲಿ ಮಯೂರಿ, ಕಿಶೋರ್ ಹಾಗೂ ವಿಹಾನ್ ಗೌಡ ಇನ್ನೂ ಅನೇಕರು ಅಭಿನಯಿಸುತ್ತಿದ್ದಾರೆ.  ಇನ್ನು ಜಿ.ವಿ.ಕೆ ಕಂಬೈನ್ಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು,  ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದೆ ಸಾಕಷ್ಟು ಕುತೂಹಲವನ್ನು ಹುಟ್ಟಿಸಿದೆ.

 

 

 

click me!