
ಬೆಂಗಳೂರು[ಜ.10]: ಸಿನಿಮಾ ನಿರ್ಮಾಪಕ ಕೆ ಮಂಜು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಬುಧವಾರ ರಾತ್ರಿ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯದಲ್ಲಿ ಬ್ಲಾಕೇಜ್ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬುಧವಾರ ರಾತ್ರಿಯೇ ಶಸ್ತ್ರಚಿಕಿತ್ಸೆ ಮೂಲಕ ಕ್ಲಿಯರ್ ಮಾಡಲಾಗಿದೆ. ಸದ್ಯ ಮಂಜುರವರ ಪುತ್ರ ಶ್ರೇಯಸ್ ತಂದೆಯ ಕುರಿತಾಗಿ ಮಾಹಿತಿ ನೀಡಿ ರಕ್ತನಾಳದಲ್ಲಿ ನಾಲ್ಕು ಬ್ಲಾಕ್ ಇತ್ತು. ಶಸ್ತ್ರ ಚಿಕಿತ್ಸೆ ನಡೆಸಿದ್ದೇವೆ. ಈಗ ಅಪ್ಪ ಆರೋಗ್ಯವಾಗಿದ್ದಾರೆ, ಆತಂಕಪಡುವಂತದ್ದೇನಿಲ್ಲ. ವೈದ್ಯರು ಮೂರು ದಿನ ರೆಸ್ಟ್ ಹೇಳಿದ್ದಾರೆ. ಭಾನುವಾರ ಡಿಸ್ಚಾರ್ಜ್ ಮಾಡುತ್ತೇವೆ ಎಂದಿದ್ದಾರೆ.
ನಟ ಯಶ್, ಸುದೀಪ್ ಸೇರಿದಂತೆ ಎಲ್ಲರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ರವಿಚಂದ್ರನ್ ಆಸ್ಪತ್ರೆಗೆ ತೆರಳಿ ಮಂಜುರವರನ್ನು ಭೇಟಿಯಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.