
ವರನಟ ಡಾ. ರಾಜ್ ಕುಮಾರ್ ಅಭಿಮಾನಿಗಳನ್ನೇ ದೇವರೆಂದು ಕರೆದ ದೇವತಾ ಮನುಷ್ಯ. ಅಭಿಮಾನಿಗಳಿಗೂ ಅಷ್ಟೇ. ಅವರನ್ನು ದೇವರೆಂದೇ ಆರಾಧಿಸುತ್ತಾರೆ.
ಮೈಸೂರಿನಲ್ಲಿ ಅವರ ಅಭಿಮಾನಿಯೊಬ್ಬರು ಡಾ. ರಾಜ್ ಖ್ಯಾತ ಸಿನಿಮಾ ಕಸ್ತೂರಿ ನಿವಾಸ ದ ಹೆಸರನ್ನು ತಮ್ಮ ಮನೆಗೆ ಇಟ್ಟಿದ್ದಾರೆ. ಅಷ್ಟೇ ಅಲ್ಲ. ಅವರ ಮನೆಯ ದೇವರ ಕೋಣೆ, ಮನೆ ಗೋಡೆ ತುಂಬೆಲ್ಲಾ ಅಣ್ಣಾವ್ರ ಫೋಟೋಗಳನ್ನು ಹಾಕಿಕೊಂಡಿದ್ದಾರೆ.
ಪುನೀತ್ ‘ಯುವರತ್ನ’ ಸಿನಿಮಾ ಶೂಟಿಂಗ್ ಗೆಂದು ಮೈಸೂರಿಗೆ ತೆರಳಿದ್ದರು. ಆಗ ಇವರ ಮನೆಗೆ ಭೇಟಿ ನೀಡಿದ್ದಾರೆ. ಅಣ್ಣಾವ್ರ ಮೇಲಿನ ಅಭಿಮಾನ ಕಂಡು ಖುಷಿಯಾಗಿದ್ದಾರೆ.
ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.