
ಭಾರಿ ಕುತೂಹಲ ಮೂಡಿಸಿದ್ದ ವಿಜಯ ಕಿರಗಂದೂರು ನಿರ್ಮಾಣದ ಈ ಚಿತ್ರಕ್ಕೆ ‘ಕ್ರಾಂತಿ ವೀರ’ ಎಂದು ಹೆಸರಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪರುಶುರಾಮ, ಜ್ವಾಲಮುಖಿ ಹೀಗೆ ಬೇರೆ ಬೇರೆ ಹೆಸರುಗಳು ಓಡಾಡುತ್ತಿತ್ತು. ಈ ಸಾಲಿಗೆ ಈಗ ‘ಕ್ರಾಂತಿ ವೀರ’ ಹೆಸರು ಸೇರಿಕೊಂಡಿದೆ.
ಆರ್ ರಾಮಮೂರ್ತಿ ನಿರ್ದೇಶಿಸಿ, ನಿರ್ಮಿಸಿರುವ, 1972 ರಲ್ಲಿ ತೆರೆಕಂಡ ಡಾ ರಾಜ್ ಕುಮಾರ್ ಅಭಿನಯದ ‘ಕ್ರಾಂತಿ ವೀರ’ ಚಿತ್ರದ ಹೆಸರನ್ನೇ ಈ ಚಿತ್ರಕ್ಕೂ ಇಡಲಾಗಿದೆ ಎನ್ನಲಾಗಿದೆ. ಆ ಮೂಲಕ ಮೂರನೇ ಚಿತ್ರಕ್ಕೂ ಹಳೆಯ ಹೆಸರುಗಳ ಮೊರೆ ಹೋಗಿರುವ ಸಂತೋಷ್ ಆನಂದ್ರಾಮ್, ಚಿತ್ರದ ಟೈಟಲ್ ಅನ್ನು ನ.1ರಂದು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.