
ನಿರ್ದೇಶಕ ರಾಜಮೌಳಿ ಹಾಗೂ ಕತೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ಹೊಸದಾಗಿ ಪರಿಚಯಿಸಬೇಕಿಲ್ಲ. ‘ಬಾಹುಬಲಿ' ಖ್ಯಾತಿಯ ಎಸ್ಎಸ್ ರಾಜಮೌಳಿಯ ಅಷ್ಟೂಯಶಸ್ವೀ ಚಿತ್ರಗಳ ಕತೆಗಾರ ಅವರ ತಂದೆ ವಿಜಯೇಂದ್ರ ಪ್ರಸಾದ್. ಇಲ್ಲಿ ಬೇರೆ ವಿಷಯವನ್ನೇ ಹೇಳಬೇಕು. ವಿಜಯೇಂದ್ರ ಪ್ರಸಾದ್ ಅವರು ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ, ಅದೂ ಕನ್ನಡದಲ್ಲಿ. ಆ ಚಿತ್ರಕ್ಕೆ ರಾಜಮೌಳಿ ವಾಯ್ಸ್ ಓವರ್ ಕೊಟ್ಟಿದ್ದಾರೆ. ಆ ಚಿತ್ರದ ಹೆಸರು: ‘ಶ್ರೀವಲ್ಲಿ'. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಸೆಟ್ಟೇರಿ ಚಿತ್ರೀಕರಣ ಮುಗಿಸಿ, ಇತ್ತೀಚೆಗಷ್ಟೇ ಆಡಿಯೋ ಬಿಡುಗಡೆ ನಡೆದಿದೆ, ಸದ್ಯದಲ್ಲೇ ತೆರೆ ಕಾಣಲಿದೆ.
ತಮ್ಮ ತಂದೆಯ ಸಿನಿಮಾ ಬಿಡುಗಡೆ ಹೊತ್ತಿನಲ್ಲಿ ಅವರಿಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಚಿತ್ರಕ್ಕೆ ಹಿನ್ನೆಲೆ ಧ್ವನಿ ಕೊಡುವುದಕ್ಕೆ ರಾಜಮೌಳಿ ಮುಂದಾಗಿದ್ದಾರೆ. ಅಂದರೆ ಚಿತ್ರದಲ್ಲಿ ನಟಿಸಿರುವ ಎಲ್ಲ ಮುಖ್ಯ ಪಾತ್ರದಾರಿಗಳನ್ನು ತೆರೆ ಮೇಲೆ ಹಿನ್ನೆಲೆ ಧ್ವನಿ ಮೂಲಕ ಪರಿಚಯಿ ಸುವ ಕೆಲಸವನ್ನು ರಾಜಮೌಳಿ ಮಾಡುತ್ತಿದ್ದಾರೆ. ವಿಶೇಷ ಅಂದರೆ ಕನ್ನಡ ಹಾಗೂ ತೆಲುಗು- ಎರಡೂ ಭಾಷೆಯಲ್ಲೂ ರಾಜ್ಮೌಳಿ ಯದ್ದೇ ಧ್ವನಿ ಇರುತ್ತದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.