ಸೋಷಿಯಲ್ ಮೀಡಿಯಾಗೆ ರಕ್ಷಿತ್ ಶೆಟ್ಟಿ ಕಮ್ ಬ್ಯಾಕ್; ಮೊದಲ ಮೆಸೇಜ್ ಏನ್ ನೋಡಿ!

Published : Jun 06, 2019, 01:58 PM ISTUpdated : Jun 06, 2019, 01:59 PM IST
ಸೋಷಿಯಲ್ ಮೀಡಿಯಾಗೆ ರಕ್ಷಿತ್ ಶೆಟ್ಟಿ ಕಮ್ ಬ್ಯಾಕ್; ಮೊದಲ ಮೆಸೇಜ್ ಏನ್ ನೋಡಿ!

ಸಾರಾಂಶ

ಸೋಷಿಯಲ್ ಮೀಡಿಯಾಗೆ ರಕ್ಷಿತ್ ಶೆಟ್ಟಿ ವಾಪಸ್ |  ಹುಟ್ಟುಹಬ್ಬಕ್ಕೆ ಅವನೇ ಶ್ರೀಮನ್ನಾರಾಯಣ ಟೀಸರ್ ಗಿಫ್ಟ್ | ಟ್ವಿಟರ್ ನಲ್ಲಿ ಮೊದಲ ಸಂದೇಶ ಏನ್ ಗೊತ್ತಾ? 

ಸ್ಯಾಂಡಲ್ ವುಡ್ ಕಿರಿಕ್ ಹುಡುಗ, ಸಿಂಪಲ್ ಸ್ಟಾರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೊತೆಗೆ ಸೋಷಿಯಲ್ ಮೀಡಿಯಾಗೆ ವಾಪಸ್ಸಾಗಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಡಬಲ್ ಸಂಭ್ರಮ. 

‘ಕಿರಿಕ್ ಹುಡುಗ’ನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ

‘ಅಭಿಮಾನಿಗಳ ಜತೆ ನೇರ ಸಂಪರ್ಕದಲ್ಲಿರುವುದಕ್ಕೆ ಸೋಷಲ್‌ ಮೀಡಿಯಾ ದೊಡ್ಡ ಮಟ್ಟದಲ್ಲಿ ಸೇತುವೆ ಆಗುತ್ತಿದೆ. ಅದರಿಂದ ನಾನು ಇಷ್ಟುದಿನ ದೂರ ಇದ್ದೆ. ಈಗ ಮತ್ತೆ ಸೋಷಲ್‌ ಮೀಡಿಯಾಗೆ ಮರಳುತ್ತಿದ್ದೇನೆ. ಟೀಮ್‌ ರಕ್ಷಿತ್‌ ಶೆಟ್ಟಿಹೆಸರಿನಲ್ಲಿ ನೇರವಾಗಿ ಅಭಿಮಾನಿಗಳ ಜತೆ ಮಾತನಾಡುತ್ತೇನೆ. ನನ್ನ ಚಿತ್ರಗಳ ವಿವರಣೆಗಳನ್ನು ಹೇಳುತ್ತೇನೆ. ಸದ್ಯಕ್ಕೆ ಅವನೇ ಶ್ರೀಮನ್ನಾರಾಯಣ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೊಸ ಹೊಸ ವಿಚಾರಗಳನ್ನು ಹೇಳಲಿದ್ದೇನೆ’ ಎಂದಿದ್ದರು.  ಈಗ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾಗೆ ವಾಪಸ್ಸಾಗಿದ್ದಾರೆ. ಅವರ ಮೊದಲ ಸಂದೇಶ ಏನು ಗೊತ್ತಾ? 

 

ಬಿರುಗಾಳಿ ಏಳುವ ಮುನ್ನ ಮೌನವಿತ್ತಾ? ಎಂದು ಹಾಕಿದ್ದಾರೆ. ಇದರ ಅರ್ಥವೇನು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಇಷ್ಟು ದಿನ ಸೈಲೆಂಟಾಗಿದ್ದೆ. ಈಗ ವಾಪಸ್ಸಾಗಿದ್ದೇನೆ. ಇನ್ನು ಮುಂದೆ ಹವಾ ಶುರುವಾಗುತ್ತದೆ ಎಂಬರ್ಥದಲ್ಲಿ ಹೇಳಿರಬಹುದಾ? ಎಂದು ಅಭಿಮಾನಿಗಳು ಅರ್ಥೈಸಿಕೊಂಡಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar