ತರ್ಲೆ ಕಾಲೇಜಿನ ಪ್ರಿನ್ಸಿಪಾಲ್ ರವಿಶಂಕರ್

Published : Oct 11, 2018, 01:30 PM IST
ತರ್ಲೆ ಕಾಲೇಜಿನ ಪ್ರಿನ್ಸಿಪಾಲ್ ರವಿಶಂಕರ್

ಸಾರಾಂಶ

‘ತರ್ಲೆ ವಿಲೇಜ್’ ಚಿತ್ರ ನಿರ್ದೇಶಿಸಿದ್ದ ಕೆಎಂ ರಘು ಮತ್ತೊಂದು ಚಿತ್ರ ನಿರ್ದೇಶಿಸುತ್ತಿದ್ದಾರೆ. ಅದರ ಹೆಸರು ‘ತರ್ಲೆ ಕಾಲೇಜ್’.

ಈ ಚಿತ್ರಕ್ಕೆ ಮಂಜುನಾಥ್ ಎನ್. ಪೂಜಾರಿ ನಿರ್ಮಾಪಕರು. ಚಿತ್ರದ ಪ್ರಮುಖ ಆಕರ್ಷಣೆ ಅಂದರೆ, ಖಳನಟ ರವಿಶಂಕರ್. ರವಿಶಂಕರ್ ಅವರಿಲ್ಲಿ ಪ್ರಿನ್ಸಿಪಾಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದು ವಿಶೇಷ.

‘ಕತೆ ಏನು ಎಂಬ ಪ್ರಶ್ನೆಗೆ ಚಿತ್ರದ ಹೆಸರಿನಲ್ಲೇ ಇದೆ. ಇದು ಕಾಲೇಜಿನ ಲಾಸ್ಟ್ ಬೆಂಚ್ ವಿದ್ಯಾರ್ಥಿಗಳ ವಿದ್ಯಮಾನಗಳ ಸುತ್ತ ಸಾಗುವ ಸಿನಿಮಾ. ಕಿರಿಕ್ ಪಾರ್ಟಿ ಚಿತ್ರದ ನೆರಳಲ್ಲಿ, ಅದೇ ಫ್ಲೇವರ್‌ನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಇದು’ ಎನ್ನುತ್ತಾರೆ ನಿರ್ದೇಶಕ ಕೆಎಂ ರಘು. ಶೇ.35ರಷ್ಟು ಅಂಕ ಪಡೆದ ಲಾಸ್ಟ್ ಬೆಂಚ್‌ನ ತರ್ಲೆ ಹುಡುಗರನ್ನು ತಿದ್ದಿ, ಅವರಿಗೊಂದು ಹೊಸ ವೇದಿಕೆ ರೂಪಿಸುವ ಪ್ರಿನ್ಸಿಪಾಲ್ ಕತೆ ಇಲ್ಲಿದೆ. ಹೀಗಾಗಿ ರವಿಶಂಕರ್ ಅವರೇ ಪ್ರಮುಖ ಪಾತ್ರ. ಇಲ್ಲಿ ನಾಲ್ವರು ಹೀರೋಗಳು, ನಾಲ್ವರು ನಾಯಕಿಯರೂ ಇರುತ್ತಾರೆ. ಸದ್ಯಕ್ಕೆ ಈ ಜೋಡಿಗಳ ಆಡಿಷನ್ ನಡೆಯುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

666 operation Dream Theatre Teaser: ಶಿವರಾಜ್‌ಕುಮಾರ್-ಧನಂಜಯ್ '666 ಆಪರೇಶನ್ ಡ್ರೀಮ್ ಥಿಯೇಟರ್ ಟೀಸರ್' ಬಿಡುಗಡೆ; ಭಾರೀ ಹೈಪ್ ಸೃಷ್ಟಿ!
BBK13: 'ಪ್ರತಿ ವರ್ಷವೂ ನನ್ನ ಹೆಸರು ಕೇಳಿಬರುತ್ತೆ'... ಈ ಬಾರಿ ಬಿಗ್ ಬಾಸ್‌ಗೆ ಹೋಗ್ತಾರಾ ಮೇಘಾ ಶೆಟ್ಟಿ?