
ಮುಂಬೈ: ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ನಿಧನಕ್ಕೆ ಇಡೀ ದೇಶ ಶೋಕತಪ್ತವಾಗಿರುವಾಗಲೇ ಚಿತ್ರನಿರ್ದೇಶಕ ರಾಮ್ಗೋಪಾಲ್ ವರ್ಮಾ, ಶ್ರೀದೇವಿ ಜೀವನದ ಕುರಿತು ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ. ವರ್ಮಾ ಈ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
ಆದರೆ, ಚಿತ್ರಸಾಹಿತಿ ಸಿರಾಸ್ರಿ ತೆಲುಗು ಟೀವಿ ವಾಹಿನಿಯೊಂದರ ಚರ್ಚೆಯ ವೇಳೆ ಈ ಬಗ್ಗೆ ಸುಳಿವು ನೀಡಿದ್ದಾರೆ. ಕಥೆ ಸಿದ್ಧವಾದ ಬಳಿಕ ರಾಮ್ಗೋಪಾಲ್ ವರ್ಮಾ ಅಧಿಕೃತವಾಗಿ ಚಿತ್ರವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.
ರಾಮ್ಗೋಪಾಲ್ ವರ್ಮಾ ಅವರ ಕ್ಷಣಂ ಕ್ಷಣಂ ತೆಲುಗು ಚಿತ್ರದಲ್ಲಿ ಶ್ರೀದೇವಿ ಅಭಿನಯಿಸಿದ್ದರು. ಜೊತೆಗೆ ಶ್ರೀದೇವಿ, ಭೂಲೋಕಲದ ಅತಿಸುಂದರಿ ಎಂದು ಹಿಂದಿನಿಂದಲೂ ವರ್ಮಾ ಹೊಗಳಿಕೊಂಡು ಬಂದಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.