ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ನಟ, ನಿರ್ದೇಶಕ ಟಪೋರಿ ಸತ್ಯ ನಿಧನ

By Govindaraj SFirst Published Apr 24, 2023, 8:15 AM IST
Highlights

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
 

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ, ಮೂವರು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. 

ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಟಪೋರಿ ಸತ್ಯ ಅವರು ಮನೆಗೆ ಆಧಾರವಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದು ಮಗನ ಪಾರ್ಥಿವ ಶರೀರದ ಮುಂದೆ ಕುಳಿತು ತಾಯಿ ರುಕ್ಕಮ್ಮ ಕಣ್ಣೀರಿಡುತ್ತಿದ್ದಾರೆ. ಇನ್ನು ಬನಶಂಕರಿ ಮೂರನೇ ಹಂತದಲ್ಲಿ ಇರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

Latest Videos

ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯ ಆತ್ಮಹತ್ಯೆ: ವೈಯಕ್ತಿಕ ಕಾರಣಕ್ಕೆ ಎಂದು ಡೆತ್‌ನೋಟ್‌ ಪತ್ತೆ!

ಅಗ್ನಿಸಾಕ್ಷಿ ಧಾರವಾಹಿಯ ನಟ ಸಂಪತ್‌ ಆತ್ಮಹತ್ಯೆಗೆ ಶರಣು: ಕನ್ನಡದ ಜನಪ್ರಿಯ ಅಗ್ನಿಸಾಕ್ಷಿ ಧಾರಾವಾಹಿಯ ನಟನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೆಲಮಂಗಲ ನಿವಾಸಿ ಸಂಪತ್‌ ಜಯರಾಮ್‌(35) ಆತ್ಮಹತ್ಯೆಗೆ ಶರಣಾದ ನಟ. ನೆಲಮಂಗಲದ ನಿವಾಸದಲ್ಲಿ ಶನಿವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಂಪತ್‌ ಜಯರಾಮ್‌ ಅವರು ಧಾರಾವಾಹಿ ಹಾಗೂ ಕೆಲ ಸಿನಿಮಾಗಳಲ್ಲಿ ನಡೆಸಿದ್ದಾರೆ. ವರ್ಷದ ಹಿಂದೆಯಷ್ಟೇ ಸಂಪತ್‌ ಜಯರಾಮ್‌ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಧಾರವಾಹಿ ಹಾಗೂ ಸಿನಿಮಾಗಳಲ್ಲಿ ಅವಕಾಶಗಳ ಕೊರತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನೆಲಮಂಗಲ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

click me!