ತಲೆ ಮರೆಸಿಕೊಂಡಿದ್ದ ದುನಿಯಾ ವಿಜಯ್ ಆರೆಸ್ಟ್..!

Published : Jun 08, 2018, 11:55 AM ISTUpdated : Jun 08, 2018, 11:56 AM IST
ತಲೆ ಮರೆಸಿಕೊಂಡಿದ್ದ ದುನಿಯಾ ವಿಜಯ್ ಆರೆಸ್ಟ್..!

ಸಾರಾಂಶ

’ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಕುರಿತಂತೆ ನಿರ್ಮಾಪಕ ಸುಂದರ್ ಪಿ. ಗೌಡ ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿರ್ಮಾಪಕರು ತಪ್ಪಿಸಿಕೊಳ್ಳಲು ಸಹಕರಿಸಿದ್ದರು. ಈ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರು[ಜೂ.08]: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಿ ಅವರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

’ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಕುರಿತಂತೆ ನಿರ್ಮಾಪಕ ಸುಂದರ್ ಪಿ. ಗೌಡ ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿರ್ಮಾಪಕರು ತಪ್ಪಿಸಿಕೊಳ್ಳಲು ಸಹಕರಿಸಿದ್ದರು. ಈ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ವಿಜಯ್ ತಲೆ ಮರೆಸಿಕೊಂಡಿದ್ದರು.  

ದುನಿಯಾ ವಿಜಯ್ ವಿರುದ್ಧ ಎಫ್’ಐಆರ್ ದಾಖಲಾಗಿತ್ತು. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ದುನಿಯಾ ವಿಜಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಕೊನೆಗೆ ದುನಿಯಾ ವಿಜಿಗಾಗಿ ವಿಶೇಷ ತಂಡ ರಚನೆ ಮಾಡಿದ್ದ ಪೋಲೀಸರು, ಮೊಬೈಲ್ ನೆಟ್ವರ್ಕ್ ಆಧರಿಸಿ ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ಕಲಾವಿದರಾದ ಉದಯ್ ಹಾಗೂ ಅನಿಲ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆ 'XYZ' ವ್ಯಕ್ತಿ ಯಾರೆಂದೇ ಗೊತ್ತಿಲ್ಲ.. ನಾನು ಯಾರನ್ನೂ ಮದುವೆಯಾಗಿಲ್ಲ; ನಟಿ ಮೆಹ್ರೀನ್ ಪೀರ್ಜಾದಾ ಕೆಂಡಾಮಂಡಲ!
'ಜನರದ್ದು ಎಮ್ಮೆಯ ಚರ್ಮ'.. ಅಂದು ಹೇಳಿದ್ದ ಅಕ್ಷಯ್ ಖನ್ನಾ ಮಾತೀಗ ವೈರಲ್.. ಈಗ ನೆಟ್ಟಿಗರು ಹೇಳ್ತಿರೋದೇನು?